ಆ್ಯಪ್ನಗರ

ಮೈತ್ರಿಗೆ ಯಾವುದೇ ಭಂಗವಿಲ್ಲ: ಸಚಿವ ಬಂಡೆಪ್ಪ ಖಾಶೆಂಪುರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷ ಗಳ ಮೈತ್ರಿಗೆ ಯಾವುದೇ ಭಂಗವಿಲ್ಲ...

Vijaya Karnataka 21 Feb 2019, 5:00 am
ಹಾರೋಹಳ್ಳಿ (ಕನಕಪುರ ತಾ.): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷ ಗಳ ಮೈತ್ರಿಗೆ ಯಾವುದೇ ಭಂಗವಿಲ್ಲ. ಸರಕಾರ ಸುಭದ್ರವಾಗಿದ್ದು ಲೋಕಸಭಾ ಚುನಾವಣೆಯನ್ನು ಒಟ್ಟುಗೂಡಿ ಸಕ್ರಿಯವಾಗಿ ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಹೇಳಿದರು.
Vijaya Karnataka Web there is no threat to the alliance minister bandeppa kapasampura
ಮೈತ್ರಿಗೆ ಯಾವುದೇ ಭಂಗವಿಲ್ಲ: ಸಚಿವ ಬಂಡೆಪ್ಪ ಖಾಶೆಂಪುರ


ಹಾರೋಹಳ್ಳಿ ಸಮೀಪದ ವಡೇರಹಳ್ಳಿ ಗ್ರಾಮದ ಸುವರ್ಣಮುಖಿ ಸಂಕೃತಿಧಾಮ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ''ರಾಜಕೀಯ ಲಾಭಕ್ಕೆ ವಿರೋಧ ಪಕ್ಷ ಗಳು ಏನೇ ಮಾತನಾಡಿದರೂ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷ ಮೈತ್ರಿಯಲ್ಲಿಯೇ ಚುನಾವಣೆ ನಡೆಯಲಿದೆ. ಈ ಮೂಲಕ ಅತಿಹೆಚ್ಚು ಸೀಟುಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಲಾಗಿದೆ,'' ಎಂದು ತಿಳಿಸಿದರು.

''ದೋಸ್ತಿ ಪಕ್ಷ ಗಳಲ್ಲಿ ಚುನಾವಣೆ ಸೀಟು ಹಂಚಿಕೆಯಲ್ಲಿ ಒಂದುವೇಳೆ ಗೊಂದಲ ಉಂಟಾದರೆ, ನಮ್ಮ ಪಕ್ಷ ದ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ ಅವರ ನಿರ್ಧಾರದಲ್ಲಿ ಅದು ಇತ್ಯರ್ಥಗೊಳ್ಳಲಿದೆ. ಹಾಸನದ ಲೋಕಸಭಾ ಚುನಾವಣೆ ಅಭ್ಯರ್ಥಿಯಲ್ಲಿ ಪ್ರಜ್ವಲ್‌ ಸ್ಪರ್ಧಿಸುವ ಆಸೆ ಇಂಗಿತ ವ್ಯಕ್ತಪಡಿಸಿದ್ದಾರೆ. ಸ್ಥಳೀಯವಾಗಿ ಕಾಂಗ್ರೆಸ್‌ ಮುಖಂಡರು ವಿರೋಧಿಸುತ್ತಿದ್ದಾರೆ. ಈ ನಿರ್ಧಾರವನ್ನು ಕೈಗೊಳ್ಳುವುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ಒಟ್ಟಿನಲ್ಲಿ ದೋಸ್ತಿ ಪಕ್ಷ ಗಳು ಈ ಚುನಾವಣೆಯ ಒಗ್ಗಟ್ಟಿನಿಂದ ಎದುರಿಸಿ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಳ್ಳುತ್ತೇವೆ,'' ಎಂದರು.

ಸೂಪರ್‌ಮಾರ್ಕೆಟ್‌: ''ರಾಮನಗರ ಜಿಲ್ಲಾ ಕೇಂದ್ರದಲ್ಲಿ ರೈತರ ಅನುಕೂಲಕ್ಕಾಗಿ ಕೆಪಿಎಂಸಿ ಯ ಸುಸಜ್ಜಿತ ಸೂಪರ್‌ಮಾರ್ಕೆಟ್‌ ನಿರ್ಮಾಣ ಮಾಡಲಾಗುವುದು. ಪಾರದರ್ಶಕ ಮತ್ತು ರೈತರಿಗೆ ಉತ್ತಮ ಸೇವೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಅದನ್ನು ಪೂರ್ಣ ಡಿಜಿಟಲ್‌ ಮಾದರಿಯಲ್ಲಿಯೇ ನಿರ್ಮಾಣ ಮಾಡಲು ಸರಕಾರ ಬದ್ಧವಿದೆ,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ