ಆ್ಯಪ್ನಗರ

ಚಿರತೆಯ ಹಾವಳಿ: ಗ್ರಾಮಸ್ಥರಲ್ಲಿ ಭೀತಿ

ತಾಲೂಕಿನ ಕಸಬಾ ಹೋಬಳಿ ಚಿಕ್ಕೇನಹಳ್ಳಿ ಗ್ರಾಮದ ಸುತ್ತ ಮುತ್ತಲಿನಲ್ಲಿ ಚಿರತೆಯ ಹಾವಳಿಯಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

Vijaya Karnataka 11 Aug 2018, 5:00 pm
ಕನಕಪುರ: ತಾಲೂಕಿನ ಕಸಬಾ ಹೋಬಳಿ ಚಿಕ್ಕೇನಹಳ್ಳಿ ಗ್ರಾಮದ ಸುತ್ತ ಮುತ್ತಲಿನಲ್ಲಿ ಚಿರತೆಯ ಹಾವಳಿಯಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
Vijaya Karnataka Web threat of cheetah fear of villagers
ಚಿರತೆಯ ಹಾವಳಿ: ಗ್ರಾಮಸ್ಥರಲ್ಲಿ ಭೀತಿ


ಕಳೆದ ಒಂದು ವಾರದಿಂದ ರಾತ್ರಿ ವೇಳೆಯಲ್ಲಿ ಚಿರತೆ ಮನೆಗಳ ಹಿತ್ತಲಿನ ಸಮೀಪ ಬರುತ್ತಿದ್ದು ಕುರಿ, ಮೇಕೆ, ಹಸುವಿನ ಕರುಗಳ ಮೇಲೆ ದಾಳಿ ನಡೆಸಿ ತಿಂದು ಹಾಕುತ್ತಿದ್ದರೂ ಸಹ ಅರಣ್ಯ ಇಲಾಖೆಯ ಅಧಿಕಾರಿಗಳು ಇತ್ತ ಗಮನಹಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಗುರುವಾರ ರಾತ್ರಿ ವೆಂಕಟೇಶ ಎಂಬುವರಿಗೆ ಸೇರಿದ ಎರಡು ಬಳ್ಳಾರಿ ತಳಿಯ ಕುರಿಗಳನ್ನು ತಿಂದು ಹಾಕಿದೆ. ಜತೆಗೆ ಆ ಕುರಿಯ ಹೊಟ್ಟೆಯಲಿದ್ದ ಮರಿಗಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಚಿಕ್ಕೇನಹಳ್ಳಿ ಮೇಗಳ ಬೀದಿಯ ಕರಿಯಪ್ಪನವರಿಗೆ ಸೇರಿದ ಹಸುವಿನ ಕರುವಿನ ಮೇಲೆ ದಾಳಿ ನಡೆಸಿ ತಿಂದು ಹೋಗಿದೆ. ಹೀಗೆ ಕೆಲವು ದಿನಗಳಿಂದ ರೈತರ ಕುರಿ, ಮೇಕೆ, ಹಸುವಿನ ಕರುಗಳನ್ನು ತಿಂದು ಹಾಕಿದೆ. ರೈತರು ಸಂಕಷ್ಟ ಸ್ಥಿತಿಯಲ್ಲಿದ್ದು, ಜಮೀನುಗಳಿಗೆ ಹೋಗಲು ಹೆದರುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಭೇಟಿ: ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ ನಿಮಗೆ ಆಗಿರುವ ನಷ್ಟವನ್ನು ಪರಿಹಾರದ ಮೂಲಕ ಒದಗಿಸಿ ಕೊಡಲಾಗುವುದು. ಸೂಕ್ತ ದಾಖಲೆಗಳನ್ನು ನೀಡಿ ಪರಿಹಾರ ಪಡೆಯಬೇಕು ಎಂದು ತಿಳಿಸಿದ್ದಾರೆ.

ಪರಿಹಾರಕ್ಕೆ ಒತ್ತಾಯ: ಚಿಕ್ಕೇನಹಳ್ಳಿ ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಅವುಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೂಡಲೇ ಚಿರತೆಯ ಹಾವಳಿ ತಪ್ಪಿಸಿ ನಮಗೆ ಸೂಕ್ತ ಪರಿಹಾರವನ್ನು ಒದಗಿಸಿ ಕೊಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ