ಆ್ಯಪ್ನಗರ

ಬಾಣವಾಡಿಯಲ್ಲಿ ವೆಂಕಟರಮಣ ಸ್ವಾಮಿ ಕಲ್ಯಾಣೋತ್ಸವ

ಮಾಗಡಿ ತಾಲೂಕಿನ ಸೋಲೂರು ಹೋಬಳಿ ಬಾಣವಾಡಿಯ ತಿಮ್ಮರಾಯಸ್ವಾಮಿ ದೇಗುಲದಲ್ಲಿ ರಥಸಪ್ತಮಿ ಪ್ರಯುಕ್ತ ವೆಂಕಟರಮಣ ಸ್ವಾಮಿ ಕಲ್ಯಾಣೋತ್ಸವ ...

Vijaya Karnataka 13 Feb 2019, 5:00 am
ಮಾಗಡಿ ಗ್ರಾಮಾಂತರ: ಮಾಗಡಿ ತಾಲೂಕಿನ ಸೋಲೂರು ಹೋಬಳಿ ಬಾಣವಾಡಿಯ ತಿಮ್ಮರಾಯಸ್ವಾಮಿ ದೇಗುಲದಲ್ಲಿ ರಥಸಪ್ತಮಿ ಪ್ರಯುಕ್ತ ವೆಂಕಟರಮಣ ಸ್ವಾಮಿ ಕಲ್ಯಾಣೋತ್ಸವ ಅದ್ದೂರಿಯಾಗಿ ನಡೆಯಿತು.
Vijaya Karnataka Web venkataramana swami kalyanotsava in banuvadi
ಬಾಣವಾಡಿಯಲ್ಲಿ ವೆಂಕಟರಮಣ ಸ್ವಾಮಿ ಕಲ್ಯಾಣೋತ್ಸವ


ಕಲ್ಯಾಣೋತ್ಸವ ನೆರವೇರಿಸಿಕೊಟ್ಟ ಆಗಮಿಕ ಅಶೋಕ್‌ ಶರ್ಮ ಮಾತನಾಡಿ, ಸೂರ್ಯೋದಯದ ಸಮಯದಲ್ಲಿ ಪವಿತ್ರ ನದಿಯಲ್ಲಿ ಸ್ನಾನ ಮಾಡಿ, ಸೂರ್ಯನಿಗೆ ಅಘ್ರ್ಯ ನೀಡಿದರೆ ಸಕಲ ದುಃಖಗಳು ಪರಿಹಾರವಾಗುತ್ತವೆ ಎಂಬ ನಂಬಿಕೆಯೂ ಇದೆ.ಉತ್ತಮ ಆರೋಗ್ಯ ಮತ್ತು ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿ ಸೂರ್ಯನನ್ನು ಪೂಜಿಸಲಾಗುತ್ತದೆ. ರಥಸಪ್ತಮಿಯ ನಂತರ ಚಳಿ ಕಡಿಮೆಯಾಗಿ ಬಿಸಿಲಿನ ಪ್ರಖರತೆ ಹೆಚ್ಚುತ್ತದೆ ಎಂದು ತಿಳಿಸಿದರು.

ಕಲ್ಯಾಣೋತ್ಸವ ಮುಗಿದ ಬಳಿಕ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು. ಬಾಣವಾಡಿ ಸುತ್ತಮುತ್ತಲ ಜನರು ಕಲ್ಯಾಣೋತ್ಸವ ಪೂಜೆಯಲ್ಲಿ ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ