ಆ್ಯಪ್ನಗರ

‘ವಿದ್ಯಾರ್ಥಿಗಳು ಸಮಾಜದ ಶಕ್ತಿಯಾಗಿ ಬದಲಾಗಲಿ’

ಕೇವಲ ಅಂಕಗಳಿಕೆಯೇ ಶಿಕ್ಷಣವಲ್ಲ ಎಂಬುದನ್ನು ವಿದ್ಯಾರ್ಥಿಗಳು ಮನಗಾ ಣಬೇಕು ಎಂದು ಜಿಲ್ಲಾ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಹೇಳಿದರು.

ವಿಕ ಸುದ್ದಿಲೋಕ 11 Mar 2016, 5:06 am
ಶಿವಮೊಗ್ಗ : ಕೇವಲ ಅಂಕಗಳಿಕೆಯೇ ಶಿಕ್ಷಣವಲ್ಲ ಎಂಬುದನ್ನು ವಿದ್ಯಾರ್ಥಿಗಳು ಮನಗಾ ಣಬೇಕು ಎಂದು ಜಿಲ್ಲಾ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಹೇಳಿದರು.
Vijaya Karnataka Web
‘ವಿದ್ಯಾರ್ಥಿಗಳು ಸಮಾಜದ ಶಕ್ತಿಯಾಗಿ ಬದಲಾಗಲಿ’


ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜು ಆವರಣದಲ್ಲಿ ಗುರುವಾರ ಆಯೋ ಜಿಸಲಾ ಗಿದ್ದ ಪ್ರತಿಭಾ ಪುರಸ್ಕಾರ -2016 ಕಾರ್ಯಕ್ರಮ ಉದ್ಘಾಟಿಸಿ ಮಾತನಾ ಡಿದರು. ಕೇವಲ ಉತ್ತಮ ಅಂಕಗಳಿ ಸುವುದು ಮಾತ್ರವೇ ಶಿಕ್ಷಣವಲ್ಲ ಎಂಬು ದನ್ನು ವಿದ್ಯಾರ್ಥಿಗಳು ಅರಿತು ಸಿಗುವ ಅವಕಾಶಗಳನ್ನು ಅವಕಾಶಗಳನ್ನು ಸಾಧ ನೆಯ ಹಾದಿಯಾಗಿ ಬದಲಾಯಿ ಸಿಕೊಳ್ಳಬೇಕು. ಆಗ ಮಾತ್ರವೇ ಜೀವನಕ್ಕೆ ಒಂದು ಅರ್ಥಸಿಗುತ್ತದೆ ಎಂದರು.

ಕುವೆಂಪು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಎನ್.ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರವೇ ಜೋತು ಬೀಳದೆ ಪಠ್ಯದ ಜತೆಯಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಬೇಕು ಎಂದರು. ಪ್ರಾಂಶುಪಾಲರಾದ ಪ್ರೊ.ಜಿ.ಶಕುಂತಲಾ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಗೌಡರಶಿವಣ್ಣ, ಡಾ.ಜಿ.ಕೃಷ್ಣಮೂರ್ತಿ, ಡಾ.ಪಿ.ಪರಮೇಶ್ವರ ನಾಯ್ಕ್, ಡಾ.ಸನಾವುಲ್ಲಾ ಮತ್ತಿತರರಿದ್ದರು.

-----------
ಪ್ರಸ್ತುತ ಶಿಕ್ಷಣ ಪದ್ಧತಿಯಲ್ಲಿ ಸೀಮಿತ ವಿಷಯಗಳನ್ನು ಮಾತ್ರವೇ ಅಳವಡಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳ ಅಸಾಧ್ಯ. ಈ ನಿಟ್ಟಿನಲ್ಲಿ ಪಠ್ಯ ರಚನೆಯು ಆಯಾ ಕಾಲಘಟ್ಟಕ್ಕೆ ಅನುಗುಣವಾಗಿ ಪರಿಷ್ಕರಣೆ ಆಗುತ್ತಿರಬೇಕು. ರಾಜ್ಯ ಮತ್ತು ರಾಷ್ಟ್ರ ಪಠ್ಯ ಪರಿಷ್ಕರಣಾ ಸಮಿತಿಯು ಶಿಕ್ಷಣದ ಮೂಲ ಉದ್ದೇಶ, ಆಶಯವನ್ನು ಅರಿತುಕೊಂಡು ಹಾಗೂ ಶಿಕ್ಷಣ ಪಡೆದ ವ್ಯಕ್ತಿ ದೇಶದ ಸಮರ್ಥ ಪ್ರಜೆಯಾಗಿ ರೂಪುಗೊಳ್ಳಲು ಅಗತ್ಯವಿರುವ ವಿಷಯಗಳನ್ನು ಪಠ್ಯದಲ್ಲಿ ಸೇರಿಸುವ ಮೂಲಕ ಕಾಲ ಕಾಲಕ್ಕೆ ಪರಿಷ್ಕರಿಸಬೇಕು .
-ರವಿ ಡಿ.ಚನ್ನಣ್ಣನವರ್,ಜಿಲ್ಲಾ ವರಿಷ್ಠಾಧಿಕಾರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ