ಸಾಗರ: ತಾಲೂಕಿನ ಶರಾವತಿ ಹಿನ್ನೀರಿನ ಕಳಸವಳ್ಳಿ ದಡದಲ್ಲಿ ಸಿಗಂದೂರು ಕ್ಷೇತ್ರಕ್ಕೆ ಬಂದಿದ್ದ ಪ್ರವಾಸಿಗನೊಬ್ಬ ಆಕಸ್ಮಿಕ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಶಂಕರ್(35) ಮೃತಪಟ್ಟವರು. ಬೆಂಗಳೂರಿನಿಂದ ಟೆಂಪೊ ಟ್ರಾವೆಲ್ಸ್ ವಾಹನದಲ್ಲಿ 12 ಜನರು ಸಿಗಂದೂರು ಪ್ರವಾಸಕ್ಕೆ ಬಂದಿದ್ದರು. ದೇವಸ್ಥಾನಕ್ಕೆ ಹೋಗುವ ಮೊದಲು ಶರಾವತಿ ನದಿಯಲ್ಲಿ ಕೆಲವರು ಸ್ನಾನಕ್ಕೆ ಇಳಿದಿದ್ದರು. ಈ ಸಂದರ್ಭ ಶಂಕರ್ ಅವರು ಕಾಲುಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ನೀರಲ್ಲಿ ಮುಳುಗಿದ್ದ ಶವವನ್ನು ಸ್ಥಳೀಯ ಈಜುಗಾರರು ಮೇಲೆತ್ತಿದ್ದಾರೆ. ರಾಜು ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.