ಆ್ಯಪ್ನಗರ

ಸಿದ್ದರಾಮಯ್ಯ ಅವರ ಅಹಂಕಾರಕ್ಕೆ ಬಿಜೆಪಿ ತಕ್ಕ ಶಾಸ್ತಿ: ಬಿಎಸ್‌ವೈ

ಅಧಿಕಾರ, ಹಣ, ತೋಳ್ಬಲ ಬಳಸುತ್ತಿರುವ ಸಿದ್ದರಾಮಯ್ಯ ಅವರ ಅಹಂಕಾರಕ್ಕೆ ಬಿಜೆಪಿ ತಕ್ಕ ಶಾಸ್ತಿ ಮಾಡಲಿದೆ. ಜಾತಿ,ಧರ್ಮಗಳ ನಡುವೆ ವಿಷಬೀಜ ಬಿತ್ತುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸದೆ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಗುಡುಗಿದರು.

Vijaya Karnataka 28 Sep 2017, 5:00 am

ತೀರ್ಥಹಳ್ಳಿ

ಅಧಿಕಾರ, ಹಣ, ತೋಳ್ಬಲ ಬಳಸುತ್ತಿರುವ ಸಿದ್ದರಾಮಯ್ಯ ಅವರ ಅಹಂಕಾರಕ್ಕೆ ಬಿಜೆಪಿ ತಕ್ಕ ಶಾಸ್ತಿ ಮಾಡಲಿದೆ. ಜಾತಿ,ಧರ್ಮಗಳ ನಡುವೆ ವಿಷಬೀಜ ಬಿತ್ತುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸದೆ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಗುಡುಗಿದರು.

ಪಟ್ಟಣದ ಟಿಎಪಿಸಿಎಂಎಸ್‌ ಸಭಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಕಾರ‍್ಯಕರ್ತರ ಬೃಹತ್‌ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದೆ. ಬೆಂಗಳೂರು ಬಿಡಿಎ ವ್ಯಾಪ್ತಿ ನಿವೇಶನಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು 1000 ಕೋಟಿ ರೂ. ಸಾಲ ಮಾಡಿರುವ ರಾಜ್ಯ ಸರಕಾರ ದಿವಾಳಿಯಾಗಿದೆ. ಸಾರ್ವಜನಿಕರ ಆಸ್ತಿ ಲೂಟಿ ಮಾಡುತ್ತಿರುವ ಸಿದ್ದರಾಮಯ್ಯ ರಾಜ್ಯಕ್ಕೆ ಶಾಪ. ರಾಹುಲ್‌ಗಾಂಧಿ ಮುಂದಿನ ಪ್ರಧಾನಿ ಎಂದು ಅಮೆರಿಕಾದಲ್ಲಿ ಹಗಲುಗನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.

ಹಿಮಾಚಲ ಪ್ರದೇಶ, ಗುಜರಾತ್‌ ಚುನಾವಣೆ ನಂತರ ಕೇಂದ್ರ ಬಿಜೆಪಿ ನಾಯಕರು ಕರ್ನಾಟಕ ಚುನಾವಣೆ ಕಡೆಗೆ ವಿಶೇಷ ಆಸಕ್ತಿ ವಹಿಸಲಿದ್ದಾರೆ. ಇಬ್ಬರು ಕೇಂದ್ರ ಸಚಿವರು ಈಗಾಗಲೇ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇನ್ನಷ್ಟು ಕೇಂದ್ರ ಸಚಿವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್‌ ಸರಕಾರವನ್ನು ಧೂಳೀಪಟ ಮಾಡುವುದು ಮುಖ್ಯ ಗುರಿ ಎಂದರು.

ನವೆಂಬರ್‌ 2ರಿಂದ 15ರವರೆಗೆ ರಾಜ್ಯದಲ್ಲಿ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಆರಂಭವಾಗಲಿದೆ. ದೇಶದಲ್ಲಿ 11 ಕೋಟಿ ಸದಸ್ಯರನ್ನು ಹೊಂದಿರುವ ಬಿಜೆಪಿ ಬಲಿಷ್ಠ ಪಕ್ಷವಾಗಿದ್ದು, ಕಾಂಗ್ರೆಸ್‌ ಅಧೋಗತಿಗೆ ತಲುಪಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎಂಬುದು ಬಿಜೆಪಿ ಗುರಿ ಅಲ್ಲ. ಕಾಂಗ್ರೆಸ್‌ನ್ನು ಕಿತ್ತೊಗೆಯಬೇಕು ಎಂಬುದು ಬಿಜೆಪಿ ಗುರಿ ಎಂದು ತಿಳಿಸಿದರು.

ಮಾಜಿ ಸಚಿವ ಕುಮಾರಬಂಗಾರಪ್ಪ, ಮಾಜಿ ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಮಾತನಾಡಿದರು. ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಬೇಗುವಳ್ಳಿ ಸತೀಶ್‌, ಚುನಾವಣೆ ವೀಕ್ಷಕ ಬ್ಯಾಟೇರಂಗೇಗೌಡ, ಜಿ.ಪಂ.ಮಾಜಿ ಅಧ್ಯಕ್ಷ ಅಶೋಕಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಮೋಹನ್‌ಶೆಟ್ಟಿ, ಹೊಸನಗರ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ್‌, ಜಿ.ಪಂ.ಸದಸ್ಯರಾದ ಕಾಸರವಳ್ಳಿ ಶ್ರೀನಿವಾಸ್‌, ಅಪೂರ್ವ ಶರಧಿ, ಮುಖಂಡರಾದ ನಾಗರಾಜಶೆಟ್ಟಿ, ಸಿ.ಬಿ.ಈಶ್ವರ್‌, ಸಾಲೇಕೊಪ್ಪ ರಾಮಚಂದ್ರ ಮತ್ತಿತರರು ಹಾಜರಿದ್ದರು.

Vijaya Karnataka Web
ಸಿದ್ದರಾಮಯ್ಯ ಅವರ ಅಹಂಕಾರಕ್ಕೆ ಬಿಜೆಪಿ ತಕ್ಕ ಶಾಸ್ತಿ: ಬಿಎಸ್‌ವೈ

ಕಾಗೋಡು ಕ್ಷಮೆ ಕೇಳಲಿ...

ಮಾಂಸ ತಿನ್ನುವ ವಿಷಯವಾಗಿ ಹಿರಿಯ ಸಚಿವ ಕಾಗೋಡು ತಿಮ್ಮಪ್ಪ ಎಚ್ಚರಿಕೆಯಿಂದ ಮಾತನಾಡಲಿ. ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತೆ ಕಾಗೋಡು ಹೇಳಿಕೆ ನೀಡಿರುವುದು ಖಂಡನೀಯ. ಹಿರಿಯತನ ಕಾರಣಕ್ಕೆ ಬಾಯಿಗೆ ಬಂದಂತೆ ಮಾತನಾಡಿದರೆ ಸುಮ್ಮನೆ ಇರೋಕ್ಕೆ ಆಗಲ್ಲ. ಕಾಗೋಡು ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು.

- ಬಿ.ಎಸ್‌.ಯಡಿಯೂರಪ್ಪ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ