ಆ್ಯಪ್ನಗರ

ಕಾರು ಗದ್ದೆಗೆ ಉರುಳಿ ಚಾಲಕ ಮೃತ

ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂಸಿ ಸಮೀಪದ ಮಂಡಘಟ್ಟದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

Vijaya Karnataka 3 Apr 2018, 5:00 am
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂಸಿ ಸಮೀಪದ ಮಂಡಘಟ್ಟದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
Vijaya Karnataka Web
ಕಾರು ಗದ್ದೆಗೆ ಉರುಳಿ ಚಾಲಕ ಮೃತ


ಕಾರು ಚಾಲನೆ ಮಾಡುತ್ತಿದ್ದ ರಾಘವೇಂದ್ರ (41) ಮೃತಪಟ್ಟವರು. ಕಾರಿನಲ್ಲಿದ್ದ ಇವರ ಪತ್ನಿ ಸೌಮ್ಯ, ಮಕ್ಕಳಾದ ನಾಗಶ್ರೀ, ನಂದೀಶ್‌ಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲತಃ ಹೊಸನಗರ ತಾಲೂಕು ಗುಳುಗುಳಿ ಶಂಕರ ಗ್ರಾಮದ ಇವರು, ನಗರದ ಹೊಸಮನೆ ಬಡಾವಣೆಯಲ್ಲಿ ನೆಲೆಸಿದ್ದರು. ಶಿವಮೊಗ್ಗದಿಂದ ಊರಿಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ