ವಿಷಯುಕ್ತ ಅಣಬೆ ಸೇವಿಸಿ 15 ಮಂದಿ ಅಸ್ವಸ್ಥ
ವಿಷಯುಕ್ತ ಅಣಬೆ ಸೇವಿಸಿ ಒಂದೇ ಕುಟುಂಬದ 15 ಜನರು ಅಸ್ವಸ್ಥಗೊಂಡ ಘಟನೆ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಂತೇಹಕ್ಕಲು ಗ್ರಾಮದಲ್ಲಿ ನಡೆದಿದೆ.
Vijaya Karnataka 21 Jul 2019, 5:00 am
ತೀರ್ಥಹಳ್ಳಿ: ವಿಷಯುಕ್ತ ಅಣಬೆ ಸೇವಿಸಿ ಒಂದೇ ಕುಟುಂಬದ 15 ಜನರು ಅಸ್ವಸ್ಥಗೊಂಡ ಘಟನೆ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಂತೇಹಕ್ಕಲು ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ 11ಗಂಟೆ ವೇಳೆಗೆ ಇವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಪಟ್ಟಣದ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು, ಶನಿವಾರ ಗುಣಮುಖರಾಗಿದ್ದಾರೆ.
ಘಟನಾ ಸ್ಥಳಕ್ಕೆ ತಾ.ಪಂ. ಸದಸ್ಯ ಸಾಲೇಕೊಪ್ಪ ರಾಮಚಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಕೋಣಂದೂರು ಪ್ರಾಥಮಿಕ ವೈದ್ಯಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದ ಮನೆಗಳಿಗೆ ಭೇಟಿ ನೀಡಿ ವಿಷಯುಕ್ತ ಅಣಬೆ ಸೇವಿಸದಂತೆ ಮಾಹಿತಿ ನೀಡಿದರು.
ಶುಕ್ರವಾರ ರಾತ್ರಿ 11ಗಂಟೆ ವೇಳೆಗೆ ಇವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಪಟ್ಟಣದ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು, ಶನಿವಾರ ಗುಣಮುಖರಾಗಿದ್ದಾರೆ.
ಘಟನಾ ಸ್ಥಳಕ್ಕೆ ತಾ.ಪಂ. ಸದಸ್ಯ ಸಾಲೇಕೊಪ್ಪ ರಾಮಚಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಕೋಣಂದೂರು ಪ್ರಾಥಮಿಕ ವೈದ್ಯಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದ ಮನೆಗಳಿಗೆ ಭೇಟಿ ನೀಡಿ ವಿಷಯುಕ್ತ ಅಣಬೆ ಸೇವಿಸದಂತೆ ಮಾಹಿತಿ ನೀಡಿದರು.