ಆ್ಯಪ್ನಗರ

ದ್ವಿತೀಯ ಪಿಯು ಪರೀಕ್ಷೆಗೆ 19,749 ವಿದ್ಯಾರ್ಥಿಗಳು

ಜಿಲ್ಲೆಯಲ್ಲಿಮಾರ್ಚ್ 4ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ11,128 ಬಾಲಕಿಯರು ಮತ್ತು 8,620 ಬಾಲಕರು ಸೇರಿ 19,749 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

Vijaya Karnataka 20 Feb 2020, 5:00 am
ಶಿವಮೊಗ್ಗ: ಜಿಲ್ಲೆಯಲ್ಲಿಮಾರ್ಚ್ 4ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ11,128 ಬಾಲಕಿಯರು ಮತ್ತು 8,620 ಬಾಲಕರು ಸೇರಿ 19,749 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
Vijaya Karnataka Web 19749 students ready for second pu exam
ದ್ವಿತೀಯ ಪಿಯು ಪರೀಕ್ಷೆಗೆ 19,749 ವಿದ್ಯಾರ್ಥಿಗಳು


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆಗೆ ಸಂಬಂಧಿಸಿದಂತೆ ಡಿಸಿ ಕೆ.ಬಿ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿಬುಧವಾರ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿಅವರು ಮಾಹಿತಿ ನೀಡಿದರು.

ಕಲಾ ವಿಭಾಗದಲ್ಲಿ5,808, ವಾಣಿಜ್ಯದಲ್ಲಿ7,490 ಮತ್ತು ವಿಜ್ಞಾನ ವಿಭಾಗದಲ್ಲಿ6,451 ವಿದ್ಯಾರ್ಥಿಗಳಿದ್ದಾರೆ. ಸರಕಾರಿ ಕಾಲೇಜುಗಳ 10,911, ಅನುದಾನಿತ 2,905 ಮತ್ತು ಅನುದಾನ ರಹಿತ ಕಾಲೇಜುಗಳ 5,758 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಿಗಾಗಿ ಒಟ್ಟು 33 ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತವು ಸಿದ್ಧತೆ ಮಾಡಿಕೊಂಡಿದೆ. ಅದರಲ್ಲಿಶಿವಮೊಗ್ಗದಲ್ಲಿ12, ಭದ್ರಾವತಿ 6, ತೀರ್ಥಹಳ್ಳಿ 3, ಹೊಸನಗರ 2, ಸಾಗರ 5, ಸೊರಬ 2 ಮತ್ತು ಶಿಕಾರಿಪುರದಲ್ಲಿ3 ಪರೀಕ್ಷಾ ಕೇಂದ್ರಗಳಿವೆ.

ಪರೀಕ್ಷಾ ಕೇಂದ್ರಗಳ ನಡುವೆ ಸಮನ್ವಯ ಮತ್ತು ಇತರೆ ಉದ್ದೇಶಗಳಿಗಾಗಿ ಒಟ್ಟು 11 ಮಾರ್ಗಗಳನ್ನು ರಚಿಸಲಾಗಿದೆ. ಪ್ರತಿ ಮಾರ್ಗಕ್ಕೆ ಹಿರಿಯ ಅಧಿಕಾರಿಗಳ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಜಿಲ್ಲಾಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಮಾತನಾಡಿ, ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶವಿಲ್ಲದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೊಠಡಿಯ ಒಳಗೆ ವಿದ್ಯಾರ್ಥಿಗಳು ಮಾತ್ರವಲ್ಲದೆ ಪರೀಕ್ಷೆ ಮೇಲ್ವಿಚಾರಕರೂ ಮೊಬೈಲ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಒಯ್ಯಬಾರದು. ಪ್ರತಿ ಕೊಠಡಿಯಲ್ಲಿಗಡಿಯಾರ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳ 200ಮೀಟರ್‌ ಸುತ್ತಮುತ್ತ ಪ್ರತಿಬಂಧಕಾಜ್ಞೆ ವಿಧಿಸಲಾಗುವುದು. ಪರೀಕ್ಷಾ ದಿನಗಳಂದು ಬೆಳಗ್ಗೆ 7.30ರಿಂದ ಸಂಜೆ 4ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿಪೊಲೀಸ್‌ ಸಿಬ್ಬಂದಿ ನಿಯೋಜಿಸಿ, ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಅನುರಾಧ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

---------
ಪ್ರಶ್ನೆ ಪತ್ರಿಕೆಗಳ ಮೇಲೆ ನಿಗಾ

ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪಡೆದ ಬಳಿಕ ಪರೀಕ್ಷಾ ಕೇಂದ್ರ ತಲುಪುವ ವರೆಗೆ ನಡುವೆ ಎಲ್ಲಿಯೂ ನಿಲ್ಲಿಸಬಾರದು. ಸಿಸಿಟಿವಿ ಸಮ್ಮುಖದಲ್ಲಿಮಾತ್ರ ಪ್ರಶ್ನೆ ಪತ್ರಿಕೆಗಳನ್ನು ಸಂಬಂಧಪಟ್ಟವರಿಗೆ ಹಸ್ತಾಂತರಿಸಬೇಕು. ಪ್ರಶ್ನೆ ಪತ್ರಿಕೆ ಸಾಗಣೆ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್‌ ಅಳವಡಿಸಲಾಗುವುದು. ಪರೀಕ್ಷೆ ಕರ್ತವ್ಯದಲ್ಲಿನಿರ್ಲಕ್ಷತ್ರ್ಯ ವಹಿಸಿರುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

- ಕೆ.ಬಿ.ಶಿವಕುಮಾರ್‌, ಜಿಲ್ಲಾಧಿಕಾರಿ, ಶಿವಮೊಗ್ಗ.

--------

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ