ಆ್ಯಪ್ನಗರ

ಹೆಜ್ಜೇನು ದಾಳಿ: ಮೂವರು ಆಸ್ಪತ್ರೆಗೆ ದಾಖಲು

ಮೇಲಿನ ಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯನಗರದಲ್ಲಿ ಹೆಜ್ಜೇನು ದಾಳಿಯಿಂದ ಗ್ರಾಮಸ್ಥರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.

Vijaya Karnataka 26 Mar 2019, 5:00 am
ಹೊಸನಗರ: ಮೇಲಿನ ಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯನಗರದಲ್ಲಿ ಹೆಜ್ಜೇನು ದಾಳಿಯಿಂದ ಗ್ರಾಮಸ್ಥರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
Vijaya Karnataka Web 3 person admit at hospital
ಹೆಜ್ಜೇನು ದಾಳಿ: ಮೂವರು ಆಸ್ಪತ್ರೆಗೆ ದಾಖಲು


ರಸ್ತೆ ಪಕ್ಕದಲ್ಲಿರುವ ಮರಗಳಲ್ಲಿ ಗೂಡು ಕಟ್ಟಿದ್ದ ಜೇನು ನೊಣಗಳು ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ನಡೆಸಿವೆ. ನಾಗರಿಕರು ರಕ್ಷ ಣೆಗಾಗಿ ಮನೆ, ಅಂಗಡಿ ಮುಂಗಟ್ಟುಗಳ ಒಳಗೆ ಹೋದರೂ, ಜೇನ್ನೊಣಗಳು ಹಿಂಬಾಲಿಸಿ ಬಂದು ಕಚ್ಚಿವೆ. ಘಟನೆಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಎಲ್‌.ಕೆ.ಮುರಳೀಧರ್‌ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮಸ್ಥರ ಒತ್ತಾಯ: ಕೆಲ ದಿನಗಳ ಹಿಂದೆ ಶಾಲಾ ಮಕ್ಕಳಿಗೂ ಹೆಜ್ಜೇನು ಹುಳುಗಳು ಕಚ್ಚಿದ್ದು, ಸ್ಥಳೀಯ ಆಡಳಿತ ಹಾಗೂ ಅರಣ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ