ಆ್ಯಪ್ನಗರ

ಮತದಾನ ಜಾಗೃತಿಗೆ 3500 ಕಿ.ಮೀ. ಪಯಣ

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಯಾರೊಬ್ಬರೂ ಮತದಾನದಿಂದ ದೂರ ಉಳಿಯಬಾರದು. ಎಲ್ಲರೂ ಮತದಾನ ಮಾಡಬೇಕು ಎಂಬ ಉದ್ದೇಶದಿಂದ ಚುನಾವಣಾ ಆಯೋಗ ಆನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ನಡುವೆ ಸಾಮಾಜಿಕ ಕಾರ್ಯಕರ್ತರೊಬ್ಬರು ನಾಡಿನಾದ್ಯಂತ ಬೈಕ್‌ ಸವಾರಿ ಮಾಡುತ್ತಾ ವಿಭಿನ್ನವಾಗಿ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ.

Vijaya Karnataka 21 Mar 2019, 5:00 am
ಶಿವಮೊಗ್ಗ : ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಯಾರೊಬ್ಬರೂ ಮತದಾನದಿಂದ ದೂರ ಉಳಿಯಬಾರದು. ಎಲ್ಲರೂ ಮತದಾನ ಮಾಡಬೇಕು ಎಂಬ ಉದ್ದೇಶದಿಂದ ಚುನಾವಣಾ ಆಯೋಗ ಆನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ನಡುವೆ ಸಾಮಾಜಿಕ ಕಾರ್ಯಕರ್ತರೊಬ್ಬರು ನಾಡಿನಾದ್ಯಂತ ಬೈಕ್‌ ಸವಾರಿ ಮಾಡುತ್ತಾ ವಿಭಿನ್ನವಾಗಿ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ.
Vijaya Karnataka Web SMR-20ganesh4


ಬೆಂಗಳೂರು ಮೂಲದ ಬಸವರಾಜು ಎಸ್‌. ಕಲ್ಲುಸಕ್ಕರೆ ಅವರು ಮತದಾರರ ಗಮನಸೆಳೆಯುವಂತೆ ಬೈಕ್‌ನ್ನು ವಿನ್ಯಾಸ ಮಾಡಿಕೊಂಡು ಸವಾರಿ ಮಾಡುತ್ತಿದ್ದಾರೆ. ಈಗಾಗಲೇ 19 ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದು, 20ನೇ ಜಿಲ್ಲೆಯಾಗಿ ಬುಧವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು.

ಕೇವಲ ನಗರ ಪ್ರದೇಶಕ್ಕೆ ಸೀಮಿತವಾಗದೆ, ಹಳ್ಳಿಗಳಿಗೂ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. ಕರ್ನಾಟಕದ 30 ಜಿಲ್ಲೆಗಳಲ್ಲಿ 3500 ಕಿ.ಮೀ. ಸುತ್ತಿದ ಬಳಿಕ ಬೆಂಗಳೂರಿಗೆ ವಾಪಸ್‌ ಅಗಿ ಅಲ್ಲೂ ಕೂಡ ಜಾಗೃತಿ ಮೂಡಿಸುವ ಆಶಯ ಹೊಂದಿದ್ದಾರೆ. ವಿಭಿನ್ನವಾಗಿ ಮತ ಜಾಗೃತಿ ಕೈಗೊಂಡ ಬಸವರಾಜ್‌ ಅವರನ್ನು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌, ಜಿ.ಪಂ ಸಿಇಒ ಕೆ.ಶಿವರಾಮೇಗೌಡ ಮತ್ತಿತರರು ಶ್ಲಾಘಿಸಿದ್ದಾರೆ.

----------
ಮತದಾನ ಸಂವಿಧಾನ ನಮಗೆ ನೀಡಿರುವ ಹಕ್ಕು. ಚುನಾವಣೆಯಲ್ಲಿ ಪ್ರತಿಯೊಬ್ಬರೂ ಹಕ್ಕು ಚಲಾಯಿಸಬೇಕು. ಮತದಾನ ಕೇವಲ ಹಕ್ಕಾಗಾದೆ ಕರ್ತವ್ಯ ಎಂದು ಭಾವಿಸಿ ಎಲ್ಲರೂ ಮತದಾನದಲ್ಲಿ ಭಾಗಿಯಾಗಬೇಕು. ಇದಕ್ಕಾಗಿ ಬೈಕ್‌ ಜಾಥಾ ಮಾಡುತ್ತಿದ್ದೇನೆ. ಸಾಧ್ಯವಾದಷ್ಟು ಜನರನ್ನು ತಲುಪಿ ಅವರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಿ ಎಲ್ಲರನ್ನು ಮತಕಟ್ಟೆಗೆ ಕರೆತರಬೇಕು ಎಂಬುದು ನನ್ನ ಉದ್ದೇಶ.

-ಬಸವರಾಜು ಎಸ್‌.ಕಲ್ಲುಸಕ್ಕರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ