ಆ್ಯಪ್ನಗರ

ನೇತ್ರದಾನಕ್ಕೆ 70 ಜನ ನೋಂದಣಿ

ಗೋಪಾಳಗೌಡ ಬಡಾವಣೆ ನಿವಾಸಿಗಳ ಸಂಘ ಹಾಗೂ ಚಂದನ ಆರೋಗ್ಯ ಪಾರ್ಕ್‌ ಅಭಿವೃದ್ಧಿ ಸಮಿತಿ ವತಿಯಿಂದ ನಗರದ ಚಂದನ ಆರೋಗ್ಯ ಪಾರ್ಕ್‌ನಲ್ಲಿ ಭಾನುವಾರ ಆಯೋಜಿಸಿದ್ದ ರಕ್ತ ತಪಾಸಣೆ, ಬೃಹತ್‌ ರಕ್ತದಾನ ಶಿಬಿರದಲ್ಲಿ 54 ಜನ ರಕ್ತದಾನ, 70 ಜನ ನೇತ್ರದಾನ ನೋಂದಣಿ ಮಾಡಿದರು.

Vijaya Karnataka 18 Feb 2019, 5:00 am
ಶಿವಮೊಗ್ಗ: ಗೋಪಾಳಗೌಡ ಬಡಾವಣೆ ನಿವಾಸಿಗಳ ಸಂಘ ಹಾಗೂ ಚಂದನ ಆರೋಗ್ಯ ಪಾರ್ಕ್‌ ಅಭಿವೃದ್ಧಿ ಸಮಿತಿ ವತಿಯಿಂದ ನಗರದ ಚಂದನ ಆರೋಗ್ಯ ಪಾರ್ಕ್‌ನಲ್ಲಿ ಭಾನುವಾರ ಆಯೋಜಿಸಿದ್ದ ರಕ್ತ ತಪಾಸಣೆ, ಬೃಹತ್‌ ರಕ್ತದಾನ ಶಿಬಿರದಲ್ಲಿ 54 ಜನ ರಕ್ತದಾನ, 70 ಜನ ನೇತ್ರದಾನ ನೋಂದಣಿ ಮಾಡಿದರು.
Vijaya Karnataka Web SMG-1702-2-15-17SMG4


ಮಹಾತ್ಮಗಾಂಧೀಜಿ ಅವರ 150ನೇ ಜನ್ಮದಿನ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಪುಷ್ಟ ನಮನ ಸಲ್ಲಿಸಲಾಯಿತು. ಇನ್ನೂ ವಿಶೇಷವೆಂದರೆ 25 ಜನ ಮಾಜಿ ಯೋಧರು ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ, ಖುದ್ದು ಜಿಲ್ಲಾಧಿಕಾರಿ ಕೆ.ಎ ದಯಾನಂದ್‌ ಅವರು ರಕ್ತದಾನ ಮಾಡುವ ಮೂಲಕ ಮಾದರಿಯಾದರು.

* ಅರ್ಥಪೂರ್ಣ ಕಾರ್ಯಕ್ರಮಕ್ಕೆ ಶ್ಲಾಘನೆ: ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಮಾತನಾಡಿ, ಹುತಾತ್ಮರನ್ನು ನೆನೆಸಿಕೊಂಡು ಅವರ ಹೆಸರಿನಲ್ಲಿ ರಕ್ತದಾನ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಇತ್ತೀಚೆಗೆ ಹುತಾತ್ಮರಾದ ಸೈನಿಕರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಭಯೋತ್ಪಾದನೆ ವಿಶ್ವದ ಸಮಸ್ಯೆಯಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕಿದೆ ಎಂದು ಹೇಳಿದರು.

ರಕ್ತದಾನ ಮಾಡುವುದರಿಂದ ಸಂಕಷ್ಟದಲ್ಲಿರುವ ವ್ಯಕ್ತಿಗೆ ಜೀವ ನೀಡಿದ ಸಾರ್ಥಕತೆ ಸಿಗುತ್ತದೆ. ಇದು ಅನುಭವಿÜಸಿದಾಗ ಮಾತ್ರ ಅರ್ಥವಾಗುವಂತಹದ್ದು. ಹೀಗಾಗಿ, ಪ್ರತಿಯೊಬ್ಬರು ರಕ್ತದಾನಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿಪಂ ಸದಸ್ಯ ಕಲಗೋಡು ರತ್ನಾಕರ್‌, ಸಂಘದ ಕಾರ್ಯದರ್ಶಿ ಜಿ.ಡಿ. ಮಂಜುನಾಥ್‌, ಡಾ. ಗೌತಮ್‌, ರುದ್ರಮುನಿ ಸಜ್ಜನ್‌, ಟಿ. ಮಂಜುಪ್ಪ, ಡಾ. ಶ್ರೀಧರ್‌ ಇತರರಿದ್ದರು.

==========

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ