ಆ್ಯಪ್ನಗರ

ಶಿವಮೊಗ್ಗದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಸೈನಿಕ ಶಾಲೆ ನಿರ್ಮಾಣ: ಬಿ ವೈ ರಾಘವೇಂದ್ರ

ಸೈನಿಕ ಶಾಲೆಗೆ ಸುಮಾರು 100 ಎಕರೆ ಪ್ರದೇಶ ಗುರುತಿಸುವ ಕಾರ‍್ಯ ಆರಂಭವಾಗಿದೆ. 300 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಶಾಲೆ ನಿರ್ಮಾಣ ಮಾಡಲಾಗುತ್ತದೆ. ಸೈನಿಕ ಶಾಲೆ ಸ್ಥಾಪನೆ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್‌ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗಿದೆ. ಎಲ್ಲಸೌಕರ‍್ಯಗಳೊಂದಿಗೆ ಸೈನಿಕ ಶಾಲೆ ಆರಂಭವಾಗಲಿದ್ದು ತೀರ್ಥಹಳ್ಳಿ ಭಾಗಕ್ಕೆ ವಿಶೇಷ ಆದ್ಯತೆ ಸಿಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

Vijaya Karnataka Web 24 Nov 2020, 11:03 am
ಶಿವಮೊಗ್ಗ: ದೇಶದ ಭದ್ರತೆ ಬಹಳ ಮುಖ್ಯವಾಗಿದ್ದು, ಆಗುಂಬೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸೈನಿಕ ಶಾಲೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
Vijaya Karnataka Web by raghavendra


ಸಿಗಂದೂರು ದೇವಾಲಯ ಅರಣ್ಯಭೂಮಿ ಒತ್ತುವರಿ ಪರಿಶೀಲನೆ ನಡೆಸಲು ಹೈಕೋರ್ಟ್‌ ನಿರ್ದೇಶನ

ತಾಲೂಕಿನ ವಿವಿಧ ಕಡೆಗಳಲ್ಲಿ ರಸ್ತೆ, ಸೇತುವೆ, ಸಮುದಾಯ ಭವನ ಸೇರಿದಂತೆ ಸುಮಾರು 125 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಸೈನಿಕ ಶಾಲೆಗೆ ಸುಮಾರು 100 ಎಕರೆ ಪ್ರದೇಶ ಗುರುತಿಸುವ ಕಾರ‍್ಯ ಆರಂಭವಾಗಿದೆ. 300 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಶಾಲೆ ನಿರ್ಮಾಣ ಮಾಡಲಾಗುತ್ತದೆ. ಸೈನಿಕ ಶಾಲೆ ಸ್ಥಾಪನೆ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್‌ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗಿದೆ. ಎಲ್ಲಸೌಕರ‍್ಯಗಳೊಂದಿಗೆ ಸೈನಿಕ ಶಾಲೆ ಆರಂಭವಾಗಲಿದ್ದು ತೀರ್ಥಹಳ್ಳಿ ಭಾಗಕ್ಕೆ ವಿಶೇಷ ಆದ್ಯತೆ ಸಿಗಲಿದೆ ಎಂದರು.

‘ಬಂದ್‌ಗೆ ಕರೆ ನೀಡುವವರನ್ನು ಶೂಟ್‌ ಮಾಡಿ ಬಿಸಾಕಿ’; ರಿಷಿ ಕುಮಾರ ಸ್ವಾಮಿ ವಿವಾದಾತ್ಮಕ ಹೇಳಿಕೆ

ಬೆಂಗಳೂರು- ಮುಂಬಯಿ ಕೈಗಾರಿಕಾ ಕಾರಿಡಾರ್‌ ವ್ಯಾಪ್ತಿಗೆ ಶಿವಮೊಗ್ಗ ಜಿಲ್ಲೆಸೇರ್ಪಡೆ ಮಾಡಲಾಗಿದ್ದು ವಿಮಾನ, ರೈಲುಯಾನ ಅಭಿವೃದ್ಧಿಪಡಿಸಿ ಉದ್ಯೋಗಾವಕಾಶ ಹೆಚ್ಚಿಸಲಾಗುತ್ತದೆ ಎಂದು ರಾಘವೇಂದ್ರ ಹೇಳಿದರು. ಮಾಚೇನಹಳ್ಳಿಯಲ್ಲಿ ಸ್ಪೈಸ್‌ಫುಡ್‌ ಪಾರ್ಕ್ ಶಿವಮೊಗ್ಗ ವಿಮಾನ ನಿಲ್ದಾಣದ ಎರಡನೇ ಹಂತ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುತ್ತದೆ. ಮಾಚೇನಹಳ್ಳಿಯಲ್ಲಿ ರೈತರ ಬೆಳೆ ಮೌಲ್ಯವರ್ಧನೆ ಮಾಡುವ ಸ್ಪೈಸ್‌ ಫುಡ್‌ ಪಾರ್ಕ್ ಮಾಡುವ ಉದ್ದೇಶ ಇಟ್ಟುಕೊಳ್ಳಲಾಗಿದೆ. ಪುಡ್‌ ಪಾರ್ಕ್ ನಿರ್ಮಾಣಕ್ಕೆ ಸುಮಾರು 200 ಎಕರೆ ಪ್ರದೇಶ ಬೇಕಿದ್ದು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಡೀ ರಾಷ್ಟ್ರದಲ್ಲಿ ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವ ಗುರಿ ಇಟ್ಟು ಕೊಳ್ಳಲಾಗಿದೆ ಎಂದು ರಾಘವೇಂದ್ರ ಹೇಳಿದರು.

ಅಕ್ರಮ ಗಣಿಗಾರಿಕೆಗಾಗಿ 9 ಸಾವಿರ ಮರಗಳ ನಾಶ; ವರದಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ, ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಸಾರ್ವಜನಿಕ ಕೆಲಸಗಳನ್ನು ಮಾಡುವಾಗ ತೃಪ್ತಿ ಸಿಗುತ್ತದೆ. 4 ಬಾರಿಗೆ ಶಾಸಕನಾಗಿ 2ವರೆ ವರ್ಷದೊಳಗೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸುಮಾರು 500 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿಸಲಾಗಿದೆ. ಜನರು ಕೊಟ್ಟ ಮತಕ್ಕೆ ಗೌರವ ತಂದುಕೊಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುತ್ತಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ