ಆ್ಯಪ್ನಗರ

ಆರಗ ನೇತೃತ್ವದಲ್ಲಿ ಮೆರವಣಿಗೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದಲ್ಲಿ ಶಾಸಕ ಆರಗಜ್ಞಾನೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ‍್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಮೆರವಣಿಗೆ ನಡೆಸಿದರು.

Vijaya Karnataka 24 May 2019, 5:00 am
ತೀರ್ಥಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದಲ್ಲಿ ಶಾಸಕ ಆರಗಜ್ಞಾನೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ‍್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಮೆರವಣಿಗೆ ನಡೆಸಿದರು.
Vijaya Karnataka Web SMR-23TTH2


ಕುಶಾವತಿ ನೆಹರೂ ಪಾರ್ಕ್‌ನಿಂದ ಆರಂಭವಾದ ಮೆರವಣಿಗೆ ಅಜಾದ್‌ ರಸ್ತೆ, ಗಾಂಧಿಚೌಕ, ಆಗುಂಬೆ ಬಸ್‌ ನಿಲ್ದಾಣದವರೆಗೆ ಸಾಗಿತು. ಪ್ರಧಾನಿ ನರೇಂದ್ರಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಸಾಧಿಸಿದ ಗೆಲುವಿಗೆ ಸಂತಸ ವ್ಯಕ್ತಪಡಿಸಿದರು. ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಸಾಧಿಸಿದ ಅಭೂತಪೂರ್ವ ಗೆಲುವಿಗೆ ಮುಖಂಡರು, ಕಾರ‍್ಯಕರ್ತರು ಸಂಭ್ರಮಿಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭ ಪಕ್ಷದ ರಾಜ್ಯ ಮುಖಂಡರಾದ ಅಶೋಕಮೂರ್ತಿ, ಬೇಗುವಳ್ಳಿ ಸತೀಶ್‌, ನಾಗರಾಜಶೆಟ್ಟಿ, ಆರ್‌. ಮದನ್‌, ಸಂದೇಶಜವಳಿ, ಮಂಜುನಾಥಶೆಟ್ಟಿ, ತಾ.ಪಂ.ಸದಸ್ಯರಾದ ಬೇಗುವಳ್ಳಿ ಕವಿರಾಜ್‌, ಗೀತಾಶೆಟ್ಟಿ, ಪ್ರಶಾಂತ್‌ಕುಕ್ಕೆ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ರಕ್ಷಿತ್‌ ಮೇಗರವಳ್ಳಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ