ಆ್ಯಪ್ನಗರ

ಸಾಗರ ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಸೂಕ್ತ ತನಿಖೆಗೆ ಶಾಸಕರ ಸೂಚನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೊರವಲಯದ ವಸತಿ ಶಾಲೆಯೊಂದರಲ್ಲಿ 8 ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

Authored byಶ್ರೀಲಕ್ಷ್ಮೀ ಎಚ್ಎಲ್ | Vijaya Karnataka Web 8 Jun 2023, 10:25 pm
ಸಾಗರ : ಪಟ್ಟಣ ಹೊರವಲಯದ ಖಾಸಗಿ ವಸತಿ ಶಾಲೆಯಲ್ಲಿಬಾಲಕಿಯೊಬ್ಬಳು ಗುರುವಾರ ಬೆಳಗ್ಗೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೋಷಕರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.
Vijaya Karnataka Web ಸಾವು


8ನೇ ತರಗತಿ ವಿದ್ಯಾರ್ಥಿನಿ, ಸೊರಬ ತಾಲೂಕಿನ ಶಿವಪುರ ಗ್ರಾಮದ ತೇಜಸ್ವಿನಿ(13) ಮೃತರು. ಖಾಸಗಿ ವಸತಿಶಾಲೆ ವಿರುದ್ಧ ಪೋಷಕರ ಆಕ್ರೋಶ ಭುಗಿಲೆದ್ದಿದೆ. ಮಗಳ ಸಾವು ಅನುಮಾನಾಸ್ಪದವಾಗಿದ್ದು, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ಬಾಲಕಿಯ ಶವವನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸಂಜೆ ಕಳುಹಿಸಲಾಗಿದೆ.

Maharashtra: ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿನಿ ಶವ, ಅತ್ಯಾಚಾರದ ಅನುಮಾನ: ಶಂಕಿತನ ಆತ್ಮಹತ್ಯೆ

ಶಾಲೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಬೆಳಗ್ಗೆ ಶಾಲೆಯ ವಾಹನದಲ್ಲಿಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಸತಿ ಶಾಲೆಯಲ್ಲಿಲೋಪವಾಗಿಲ್ಲ:

ಘಟನೆ ಕುರಿತು ಪ್ರತಿಕ್ರಿಯಿಸಿರುವ ವಸತಿ ಶಾಲೆ ಮುಖ್ಯಸ್ಥ ಎಚ್‌.ಪಿ. ಮಂಜಪ್ಪ, 'ಭಾನುವಾರ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ಇವರ ಜತೆ ಇವರದೇ ಕುಟುಂಬದ 7 ಮಕ್ಕಳನ್ನು ಸೇರಿಸಿಕೊಳ್ಳಲಾಗಿತ್ತು. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದ್ದಾಳೆ. ಕೂಡಲೇ ಶಾಲೆಯಲ್ಲಿಸೂಕ್ತ ಚಿಕಿತ್ಸೆ ನೀಡಲಾಗಿದೆ. ಗುರುವಾರ ಬೆಳಗ್ಗೆ ತೇಜಸ್ವಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಆಕೆಯನ್ನು ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಶಾಲೆಗೆ ಬಂದು ಐದು ದಿನವಾಗಿದ್ದರಿಂದ ಹೆಚ್ಚಿನ ಮಾಹಿತಿ ನಮಗಿಲ್ಲ. ನಮ್ಮ ವಸತಿ ಶಾಲೆಯಲ್ಲಿಯಾವುದೇ ಲೋಪದೋಷಗಳಾಗಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯ ತಿಳಿಯಲಿದೆ' ಎಂದರು.

ಕುಡಿದ ಅಮಲಿನಲ್ಲಿ ಮಲಗಿದ್ದ ಗಂಡನಿಗೆ ಬೆಂಕಿ ಇಟ್ಟು ಪರಾರಿಯಾದ ಆಂಧ್ರ ಹೆಂಡ್ತಿ!

ಬಿದ್ದು ಗಾಯಗೊಂಡಿದ್ದ ಬಾಲಕಿ:

ಘಟನೆಯ ಕುರಿತು ವಿದ್ಯಾರ್ಥಿನಿಯ ಅಣ್ಣ 'ವಿಜಯ ಕರ್ನಾಟಕ'ದೊಂದಿಗೆ ಮಾತನಾಡಿ, 'ಬುಧವಾರ ರಾತ್ರಿ ವಸತಿ ಶಾಲೆಯಲ್ಲಿದ್ದ ತಮ್ಮ ಕುಟುಂಬದವರೊಂದಿಗೆ ಮಾತನಾಡಿದಾಗ ಶಾಲೆಯಲ್ಲಿ ಯೋಗಾಸನ ಮಾಡಿಸಿದ್ದರಿಂದ ತೇಜಸ್ವಿನಿಗೆ ಕಾಲು ನೋವಾಗಿದೆ. ಇದಕ್ಕೆ ಮುಲಾಮು ಹಚ್ಚಿದ್ದು, ಗುಣಮುಖರಾಗುತ್ತಾರೆ ಎಂದು ಮಂಜಪ್ಪ ತಿಳಿಸಿದ್ದರು. ಗುರುವಾರ ಘಟನೆ ನಡೆದ ಬಳಿಕ ಮಕ್ಕಳೊಂದಿಗೆ ಮಾತನಾಡಿದಾಗ, 'ನಾನು ನೀರು ಕುಡಿಸಿಯೇ ಇದನ್ನು ಪರಿಹರಿಸುತ್ತೇನೆ' ಎಂದು ಮಂಜಪ್ಪ ಅವರು ಕುಡಿಯಲು ಲೀಟರ್‌ಗಟ್ಟಲೆ ನೀರು ಕೊಟ್ಟಿದ್ದಾರೆ. ಕಾಲಿಗೆ ಬಿದ್ದು ಪೋಷಕರೊಂದಿಗೆ ಮಾತನಾಡಲು ಕೇಳಿಕೊಂಡರೂ ಅವರು ಒಪ್ಪಿಲ್ಲ' ಎಂದು ಆರೋಪಿಸಿದರು.

ಸಮರ್ಪಕ ತನಿಖೆಗೆ ಸೂಚನೆ

ಆಸ್ಪತ್ರೆಗೆ ಧಾವಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು, ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿನಡೆಸಿ, ವರದಿ ಬಂದ ಬಳಿಕ ಸಮರ್ಪಕ ತನಿಖೆ ನಡೆಸಬೇಕು ಎಂದು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ಪ್ರವೀಣ್‌ ಕುಮಾರ್‌ಗೆ ಸೂಚಿಸಿದರು. ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪರಪ್ಪ, ವೈದ್ಯ ಪ್ರಕಾಶ್‌ ಭೋಸ್ಲೆಇದ್ದರು.
ಲೇಖಕರ ಬಗ್ಗೆ
ಶ್ರೀಲಕ್ಷ್ಮೀ ಎಚ್ಎಲ್
ಶ್ರೀಲಕ್ಷ್ಮೀ ಅವರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆಯವರು. ಕಳೆದ 5 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ವಿಜಯ ಕರ್ನಾಟಕ ಆನ್‌ಲೈನ್‌ ನಲ್ಲಿ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶೀಯ ಸುದ್ದಿಗಳು, ಲೈಫ್‌ಸ್ಟೈಲ್ ಸುದ್ದಿಗಳನ್ನು ಬರೆಯುವುದು ಅಚ್ಚುಮೆಚ್ಚು. ಹೊಸ ಹೊಸ ವಿಚಾರಗಳಿಗೆ ತೆರೆದುಕೊಳ್ಳುವುದು, ಕಲಿಯುವುದು, ಹೊಸ ಜಾಗಗಳಿಗೆ ಭೇಟಿ ನೀಡುವುದು ಇಷ್ಟದ ವಿಚಾರ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ