ಆ್ಯಪ್ನಗರ

ಎಫ್‌ಡಿಎ ಮೇಲೆ ಎಸಿಬಿ ದಾಳಿ

ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿನಿವೇಶನ ಕೊಡಿಸುವುದಾಗಿ ಹೇಳಿ ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಪಾಲಿಕೆಯ ಆಶ್ರಯ ಕಚೇರಿಯ ಪ್ರಥಮ ದರ್ಜೆ ಸಹಾಯಕನ ಮೇಲೆ ಎಸಿಬಿ ದಾಳಿ ನಡೆಸಿದೆ.

Vijaya Karnataka 27 Dec 2019, 5:00 am
ಶಿವಮೊಗ್ಗ: ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿನಿವೇಶನ ಕೊಡಿಸುವುದಾಗಿ ಹೇಳಿ ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಪಾಲಿಕೆಯ ಆಶ್ರಯ ಕಚೇರಿಯ
Vijaya Karnataka Web acb attack on fda
ಎಫ್‌ಡಿಎ ಮೇಲೆ ಎಸಿಬಿ ದಾಳಿ

ಪ್ರಥಮ ದರ್ಜೆ ಸಹಾಯಕನ ಮೇಲೆ ಎಸಿಬಿ ದಾಳಿ ನಡೆಸಿದೆ.

ಸುನೀಲ್‌ ಎಂಬಾತನ ಮೇಲೆ ದಾಳಿ ಮಾಡಲಾಗಿದೆ. ಈತ ಹರಿಗೆ ನಿವಾಸಿ ಎಲ್‌.ನಾಗರಾಜ್‌ ಎಂಬಾತನಿಗೆ ಐದು ಲಕ್ಷ ರೂ. ನೀಡುವಂತೆ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ.

ಗೋಪಾಳಗೌಡ ಬಡಾವಣೆಯಲ್ಲಿರುವ ತನ್ನ ಮನೆಯಲ್ಲಿ10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ಎಂ.ಈ. ಮನೋಜ್‌ ಕುಮಾರ್‌ ನೇತೃತ್ವದಲ್ಲಿಗುರುವಾರ ದಾಳಿ ಮಾಡಲಾಗಿದೆ. ಆರೋಪಿಯನ್ನು ಬಂಧಿಸಿ, ಲಂಚದ ಹಣ ವಶಕ್ಕೆ ಪಡೆಯಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ