ಆ್ಯಪ್ನಗರ

ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರು ಸಾವು

ಸಮೀಪದ ಐಗಿನಬೈಲಿನ ವೆಟ್‌ ನರ್ಸರಿ ತಿರುವಿನ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಲಾರಿ ಮತ್ತು ಡಾಂಬರು ತುಂಬಿದ್ದ ಟ್ಯಾಂಕರ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ಸಂಭವಿಸಿದೆ.

Vijaya Karnataka 24 Mar 2019, 5:00 am
ಆನಂದಪುರಂ : ಸಮೀಪದ ಐಗಿನಬೈಲಿನ ವೆಟ್‌ ನರ್ಸರಿ ತಿರುವಿನ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಲಾರಿ ಮತ್ತು ಡಾಂಬರು ತುಂಬಿದ್ದ ಟ್ಯಾಂಕರ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ಸಂಭವಿಸಿದೆ.
Vijaya Karnataka Web accident 3 person death
ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರು ಸಾವು


ಘಟನೆಯಲ್ಲಿ ಟ್ಯಾಂಕರ್‌ ಚಾಲಕ ಸೋಮವಾರಪೇಟೆ ತಾಲೂಕು ಕುಶಾಲನಗರದ ಸಚಿನ್‌ (25), ಕಂಡಕ್ಟರ್‌ ಬಿಜಾಪುರ ಜಿಲ್ಲೆ ತಾಳಿಕೋಟೆಯ ಮಲಕಪ್ಪ (22), ಗ್ಯಾಸ್‌ ಸಿಲಿಂಡರ್‌ ಲಾರಿ ಚಾಲಕ ಶಿಕಾರಿಪುರ ತಾಲೂಕು ಕಲವತ್ತಿ ಗ್ರಾಮದ ಲೋಕೇಶ (42) ಮೃತಪಟ್ಟಿದ್ದು, ಲಾರಿ ಕಂಡಕ್ಟರ್‌ ಉಮೇಶ್‌ ತೀವ್ರ ಗಾಯಗೊಂಡಿದ್ದಾರೆ.

ಘಟನೆಯಿಂದ ಹೆದ್ದಾರಿಯಲ್ಲಿ ಗ್ಯಾಸ್‌ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಎರಡೂ ವಾಹನಗಳು ಉರುಳಿದ್ದರಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ತಕ್ಷ ಣ ಸಾಗರದಿಂದ ಕ್ರೇನ್‌ ತರಿಸಿ ಅಪಘಾತಕ್ಕೊಗಾದ ವಾಹನಗಳನ್ನು ಎತ್ತಿ ಬದಿಗೆ ಸರಿಸಲಾಯಿತು.

ಜಿಲ್ಲಾಧಿಕಾರಿ ಭೇಟಿ: ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ದಯಾನಂದ ಬೆಳಗ್ಗೆ ಸಾಗರಕ್ಕೆ ತೆರಳುವ ಮಾರ್ಗಮಧ್ಯೆ ಭೇಟಿ ನೀಡಿದರು. ಈ ಸ್ಥಳ ತಿರುವಿನಿಂದ ಕೂಡಿದ್ದು, ಪದೇ ಪದೇ ಅಪಘಾತ ನಡೆದು ಸಾವುನೋವು ಸಂಭವಿಸುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಹೆದ್ದಾರಿಯ ತಿರುವು ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ಬಗ್ಗೆ ಶೀಘ್ರ ಹೆದ್ದಾರಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ