ಆ್ಯಪ್ನಗರ

ಅಪಘಾತ: ದ್ವಿಚಕ್ರ ವಾಹನ ಹಿಂಬದಿ ಸವಾರ ಸಾವು

ಇಲ್ಲಿನ ಜೋಗರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಭಾನುವಾರ ನಡೆದ ಕಾರು ಹಾಗೂ ದಿಚಕ್ರವಾಹನ ಅಪಘಾತದಲ್ಲಿ ದ್ವಿಚಕ್ರವಾಹನದ ಹಿಂಬದಿಯಲ್ಲಿ ಕುಳಿತಿದ್ದ ಕುಗ್ವೆಯ ಮಾಸ್ತಪ್ಪ (54) ಗಂಭೀರಗಾಯಗಳಾದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ.

Vijaya Karnataka 18 Dec 2017, 5:00 am

ಸಾಗರ: ಇಲ್ಲಿನ ಜೋಗರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಭಾನುವಾರ ನಡೆದ ಕಾರು ಹಾಗೂ ದಿಚಕ್ರವಾಹನ ಅಪಘಾತದಲ್ಲಿ ದ್ವಿಚಕ್ರವಾಹನದ ಹಿಂಬದಿಯಲ್ಲಿ ಕುಳಿತಿದ್ದ ಕುಗ್ವೆಯ ಮಾಸ್ತಪ್ಪ (54) ಗಂಭೀರಗಾಯಗಳಾದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ.

ಸಾಗರದಿಂದ ಕುಗ್ವೆ ದಿಕ್ಕಿನಲ್ಲಿ ಕರ್ಕಿಕೊಪ್ಪದ ಸಣ್ಣಪ್ಪ ಅವರ ದ್ವಿಚಕ್ರವಾಹನದಲ್ಲಿ ಹಿಂಬದಿ ಸವಾರರಾಗಿ ಮಾಸ್ತಪ್ಪ ಪ್ರಯಾಣಿಸುತ್ತಿದ್ದ ಸಂದರ್ಭ ಜೋಗದಿಂದ ಸಾಗರದ ಕಡೆಗೆ ಬರುತ್ತಿದ್ದ ಕೇರಳದ ಕಾಸರಗೋಡು ಮೂಲದ ಕಾರಿನ ಜತೆಗೆ ಡಿಕ್ಕಿ ಸಂಭವಿಸಿದೆ. ಗಂಭೀರಗಾಯಗಳಾಗಿದ್ದ ಮಾಸ್ತಪ್ಪ ಅವರನ್ನು ಉಪವಿಭಾಗೀಯ ಆಸ್ಪತ್ರೆಗೆ ಸಾಗಿಸುವುದರೊಳಗೆ ಮೃತಪಟ್ಟಿದ್ದಾರೆ. ದ್ವಿಚಕ್ರವಾಹನ ಚಾಲನೆ ಮಾಡುತ್ತಿದ್ದ ಸಣ್ಣಪ್ಪ ಅವರ ಕಾಲಿಗೆ ಗಂಭೀರ ಗಾಯಗಳಾದ ಹಿನ್ನೆಲೆಯಲ್ಲಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತ ಮಾಸ್ತಪ್ಪ ಅವರ ಮಗ ಸುಧಾಕರ ನೀಡಿದ ದೂರಿನ ಮೇಲೆ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ