ಆ್ಯಪ್ನಗರ

ಅಪಘಾತ: ಕುಟುಂಬದ ಐದು ಜನರ ಸಾವು

ತಾಲೂಕಿನ ಕುಂಸಿಯಲ್ಲಿ ಮೆಸ್ಕಾಂ ಕಿರಿಯ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮಂಗಳವಾರ ತಮ್ಮ ನಿವೃತ್ತಿಯ ದಿನವೇ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಇವರ ವಿಶ್ರಾಂತಿ ಜೀವನಕ್ಕೆ ಬೆನ್ನೆಲುಬಾಗಿ ನಿಲ್ಲಬೇಕಿದ್ದ ಕುಟುಂಬದ 5 ಜನರು ಆಯನೂರು ಹೊರವಲಯದ ಚಿಕ್ಕದಾನವಂದಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Vijaya Karnataka 1 May 2019, 5:00 am
ಶಿವಮೊಗ್ಗ : ತಾಲೂಕಿನ ಕುಂಸಿಯಲ್ಲಿ ಮೆಸ್ಕಾಂ ಕಿರಿಯ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮಂಗಳವಾರ ತಮ್ಮ ನಿವೃತ್ತಿಯ ದಿನವೇ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಇವರ ವಿಶ್ರಾಂತಿ ಜೀವನಕ್ಕೆ ಬೆನ್ನೆಲುಬಾಗಿ ನಿಲ್ಲಬೇಕಿದ್ದ ಕುಟುಂಬದ 5 ಜನರು ಆಯನೂರು ಹೊರವಲಯದ ಚಿಕ್ಕದಾನವಂದಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Vijaya Karnataka Web 3004SM001530SMG1


ಬೀರೂರಿನಲ್ಲಿ ಮೆಸ್ಕಾಂ ಎಇಇಯಾಗಿ ಕೆಲಸ ಮಾಡುತ್ತಿದ್ದ ನೀಲಕಂಠಪ್ಪ (ಚಂದ್ರಪ್ಪ ಅವರ ಅಳಿಯ), ಅವರ ಪತ್ನಿ ಉಷಾ, ಮಗ ನಂದೀಶ್‌, ಚಂದ್ರಪ್ಪ ಅವರ ಪತ್ನಿ ಮಂಗಳಮ್ಮ, ಮಗ ಮಂಜುನಾಥ್‌ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ ನೀಲಕಂಠಪ್ಪ ಅವರ ಮತ್ತೊಬ್ಬ ಪುತ್ರ ಲವಿ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಯೋನಿವೃತ್ತಿ ಹೊಂದಿದ ಚಂದ್ರಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದಕ್ಕಾಗಿ ಕುಂಸಿಗೆ ತೆರಳುತ್ತಿದ್ದಾಗ ಕಾರಿನ ಚಕ್ರ ಒಡೆದು ಹಿಂಬದಿಯಿಂದ ಬರುತ್ತಿದ್ದ ಕ್ಯಾಂಟರ್‌ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ 5 ಜನ ಮೃತಪಟ್ಟಿದ್ದಾರೆ.

ತಕ್ಷಣ ಗ್ರಾಮಸ್ಥರು ಒಗ್ಗೂಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಗಾಯಗೊಂಡ ಲವಿ ಎಂಬುವವರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಯುತ್ತಿದ್ದ ಚಂದ್ರಪ್ಪಗೆ ಸಾವಿನ ಸುದ್ದಿ: ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದ ಕುಟುಂಬಕ್ಕಾಗಿ ಕುಂಸಿಯಲ್ಲಿ ಕಾತರದಿಂದ ಕಾಯುತ್ತಿದ್ದ ಚಂದ್ರಪ್ಪ ಅವರು ಅಳಿಯ, ಪತ್ನಿ, ಮಕ್ಕಳ ಸಾವಿನ ಸುದ್ದಿ ಕೇಳಿದ್ದೇ ಜಂಘಾಬಲ ಕಳೆದುಕೊಂಡರು. ಅವರ ರೋದನೆ ಮುಗಿಲು ಮುಟ್ಟುವಂತಿತ್ತು.
========

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ