ಶಿವಮೊಗ್ಗ: ಶಿವಮೊಗ್ಗ ತಾಲೂಕು ಕುಂಸಿ ಬಳಿ ಬಿ.ಎಚ್.ರಸ್ತೆಯಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಸಚಿವ ಡಿ.ಕೆ.ಶಿವಕುಮಾರ್ ಅಪ್ತ ಸಹಾಯಕ ಮತ್ತು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆಎಎಸ್ ಅಧಿಕಾರಿ ಬೆಂಗಳೂರಿನ ಎಂ.ಲೋಕೇಶ್(38) ಮತ್ತು ನೇತ್ರಾವತಿ(35) ಮೃತಪಟ್ಟವರು. ಇವರಿಬ್ಬರು ಕಾರಿನಲ್ಲಿ ಸಾಗರ ಕಡೆಗೆ ತೆರಳುತ್ತಿದ್ದರು. ಅತಿವೇಗದಿಂದ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಪರೀಕ್ಷೆ ಬಳಿಕ ಅವರ ಬಂಧುಗಳಿಗೆ ಶವಗಳನ್ನು ಹಸ್ತಾಂತರಿಸಲಾಯಿತು.
ಕುಂಸಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.