ಆ್ಯಪ್ನಗರ

ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರ ಸಾವು

ಶಿವಮೊಗ್ಗ ಹೊರವಲಯದ ಪೆಸಿಟ್ ಕಾಲೇಜು ಬಳಿ ಭೀಕರ ಅಪಘಾತ ನಡೆದಿದ್ದು, ಶಕ್ತಧಾಮದಲ್ಲಿರುವ ಸಂಬಂಧಿಯ ಮನೆ ಗೃಹಪ್ರವೇಶ ಮುಗಿಸಿಕೊಂಡು ರಸ್ತೆ ತಿರುವು ದಾಟುವಾಗ ಹಿಂಬದಿಯಿಂದ ಕಾರು ಅಪ್ಪಳಿಸಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

Vijaya Karnataka Web 17 Feb 2019, 9:29 pm
Vijaya Karnataka Web ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರ ಸಾವು
ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರ ಸಾವು
ಶಿವಮೊಗ್ಗ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಸಿಂಗನಮನೆ ಗ್ರಾಮ ಪಂಚಾಯತಿ ಸದಸ್ಯ 52 ವರ್ಷದ ವೀರಭದ್ರಪ್ಪ ಹಾಗೂ 50 ವರ್ಷದ ಹೊರಬೈಲಿನ ಮಂಜುನಾಥ ಮೃತಪಟ್ಟಿದ್ದಾರೆ.

ಶಿವಮೊಗ್ಗ ಹೊರವಲಯದ ಪೆಸಿಟ್ ಕಾಲೇಜು ಬಳಿ ಈ ಭೀಕರ ಅಪಘಾತ ನಡೆದಿದ್ದು, ಶಕ್ತಧಾಮದಲ್ಲಿರುವ ಸಂಬಂಧಿಯ ಮನೆ ಗೃಹಪ್ರವೇಶ ಮುಗಿಸಿಕೊಂಡು ರಸ್ತೆ ತಿರುವು ದಾಟುವಾಗ ಹಿಂಬದಿಯಿಂದ ಕಾರು ಅಪ್ಪಳಿಸಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ