ಆ್ಯಪ್ನಗರ

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ: ಪ್ರವಾಸಿಗರು ಪಾರು

ಕೊಡಚಾದ್ರಿ ಬೆಟ್ಟಕ್ಕೆ ಆಗಮಿಸಿದ್ದ ಪ್ರವಾಸಿಗರ ಹುಂಡೈ ಎಸೆಂಟ್‌ ಕಾರು ರಸ್ತೆ ಪಕ್ಕದ ವಿದ್ಯುತ್‌ ಕಂಭಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕುಂಬಳೆ ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದೆ.

Vijaya Karnataka 11 Feb 2019, 10:02 pm
Vijaya Karnataka Web accident tourist safe
ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ: ಪ್ರವಾಸಿಗರು ಪಾರು

ಹೊಸನಗರ: ಕೊಡಚಾದ್ರಿ ಬೆಟ್ಟಕ್ಕೆ ಆಗಮಿಸಿದ್ದ ಪ್ರವಾಸಿಗರ ಹುಂಡೈ ಎಸೆಂಟ್‌ ಕಾರು ರಸ್ತೆ ಪಕ್ಕದ ವಿದ್ಯುತ್‌ ಕಂಭಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕುಂಬಳೆ ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದೆ.

ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಇವರು ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದರು. ಅಪಘಾತಕ್ಕೀಡಾದ ಕಾರು ಸಂಜಯ್‌ಗೆ ಸೇರಿದ್ದಾಗಿದ್ದು, ಅವರೇ ಚಾಲನೆ ಮಾಡುತ್ತಿದ್ದರು. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್‌ ಕಂಭ ತುಂಡಾಗಿದ್ದು, ತಂತಿಗಳು ಹರಿದು ಬಿದ್ದಿವೆ. ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್‌ ವಿದ್ಯುತ್‌ ಶಾಕ್‌ ಸಂಭವಿಸಿದೇ ಚಾಲಕ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುವಿನಲ್ಲಿ ಅತಿಯಾದ ವೇಗದಿಂದ ಚಾಲನೆ ಮಾಡಿದ್ದು ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ