ಆ್ಯಪ್ನಗರ

‘ಪ್ರೋತ್ಸಾಹದಿಂದ ಕ್ರೀಡಾಪಟು ಸಾಧನೆ’

ಮಹಿಳಾ ಕ್ರೀಡಾಪಟುಗಳ ಸಾಧನೆಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದು ಇಂದಿರಾಗಾಂಧಿ ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ , ಮಾಜಿ ನಗರಸಭಾಧ್ಯಕ್ಷ ಟಿ.ಡಿ.ಮೇಘರಾಜ್‌ ಹೇಳಿದರು.

Vijaya Karnataka 3 Mar 2019, 5:00 am
ಸಾಗರ: ಮಹಿಳಾ ಕ್ರೀಡಾಪಟುಗಳ ಸಾಧನೆಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದು ಇಂದಿರಾಗಾಂಧಿ ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ , ಮಾಜಿ ನಗರಸಭಾಧ್ಯಕ್ಷ ಟಿ.ಡಿ.ಮೇಘರಾಜ್‌ ಹೇಳಿದರು.
Vijaya Karnataka Web SMR-01SGR12


ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಅಂತರ್‌ ಕಾಲೇಜು ಮಹಿಳಾ ಕ್ರೀಡಾಕೂಟವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಭವಿಷ್ಯದ ದೃಷ್ಟಿಯಿಂದ ಓದಿನ ಜತೆಗೆ ಕ್ರೀಡೆಯಲ್ಲಿ ಸಾಧನೆ ಮಾಡಿದರೂ ಅತ್ಯುತ್ತಮ ಅವಕಾಶ ಪಡೆಯಬಹುದು. ಈ ಹಿನ್ನೆಲೆಯಲ್ಲಿ ಕ್ರೀಡಾ ಪ್ರತಿಭೆಗಳನ್ನು ಪ್ರಾಮಾಣಿಕವಾಗಿ ಗುರುತಿಸಿ ಅವರಿಗೆ ಮಾರ್ಗದರ್ಶನ ಮಾಡುವ ಸ್ಪಷ್ಟ ಮಾರ್ಗದರ್ಶಿ ವ್ಯವಸ್ಥೆ ಬಲಗೊಳ್ಳಬೇಕಿದೆ ಎಂದರು.

ಮುಖ್ಯ ಅತಿಥಿ, ಕುವೆಂಪು ವಿವಿ ದೈಹಿಕ ಶಿಕ್ಷ ಣ ಮತ್ತು ಕ್ರೀಡಾ ವಿಭಾಗದ ನಿರ್ದೇಶಕ ಡಾ.ಎಸ್‌.ಎಂ.ಪ್ರಕಾಶ್‌ ಮಾತನಾಡಿ, ಪಠ್ಯದ ಜತೆ ಪಠ್ಯೇತರ ಚಟುವಟಿಕೆಯಲ್ಲೂ ಆತಿಥೇಯ ಸರಕಾರಿ ಮಹಿಳಾ ಕಾಲೇಜು ರಾಜ್ಯದಲ್ಲೇ ಹೆಸರು ಗಳಿಸುತ್ತಿರುವುದು ಹೆಮ್ಮೆಯ ವಿಚಾರ. ವಿದ್ಯಾರ್ಥಿನಿಯರು ಕ್ರೀಡೆಯಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸಿ ಭವಿಷ್ಯ ರೂಪಿಸಿಕೊಂಡಿದೆ. 14 ವರ್ಷಗಳಿಂದ ಸತತವಾಗಿ ಕ್ರೀಡೆಯಲ್ಲಿ ಚಾಂಪಿಯನ್‌ ಪಟ್ಟ ಪಡೆದಿರುವ ಈ ಕಾಲೇಜು ಉಳಿದವರಿಗೆ ಮಾದರಿಯಾಗಬೇಕೆಂದರು.

ಕಾಲೇಜು ಪ್ರಾಚಾರ್ಯ ಡಾ.ಅಶೋಕ್‌ ಡಿ.ರೇವಣಕರ್‌ ಅಧ್ಯಕ್ಷ ತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾದ ಪ್ರಭಾಕರ್‌ಶೆಟ್ಟಿ, ಲಿಂಗರಾಜ್‌, ನಗರದ ಪೊಲೀಸ್‌ ಅಧಿಕಾರಿ ಬಡಿಯಪ್ಪ. ಉಪನ್ಯಾಸಕ ಡಾ.ಉಮೇಶ್‌, ದೈಹಿಕ ತರಬೇತುದಾರ ವೆಂಕಟೇಶ್‌ ಇತರರು ಇದ್ದರು. ಸಿಂಚÜನ ಪ್ರಾರ್ಥಿಸಿ, ಡಾ.ರಘುನಾಥ್‌ ಸ್ವಾಗತಿಸಿದರು. ಡಾ.ರವೀಂದ್ರಭಟ್ಟ ಕುಳಿಬೀಡು ಪ್ರಾಸ್ತಾವಿಕ ಮಾತನಾಡಿದರು. ಎಂ.ಜಿ.ರಂಗಣ್ಣನವರ್‌ ವಂದಿಸಿ, ನಮ್ರತಾ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ