ಆ್ಯಪ್ನಗರ

ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು

ಮಾಜಿ ಸಚಿವ, ಹಿರಿಯ ಕಾಂಗ್ರೆಸಿಗ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಗುರುವಾರ ದಿಢೀರ್‌ ಏರಿಳಿತ ಕಂಡುಬಂದ ಹಿನ್ನೆಲೆಯಲ್ಲಿ ತಡರಾತ್ರಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

Vijaya Karnataka 6 Jul 2019, 5:00 am
ಸಾಗರ : ಮಾಜಿ ಸಚಿವ, ಹಿರಿಯ ಕಾಂಗ್ರೆಸಿಗ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಗುರುವಾರ ದಿಢೀರ್‌ ಏರಿಳಿತ ಕಂಡುಬಂದ ಹಿನ್ನೆಲೆಯಲ್ಲಿ ತಡರಾತ್ರಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
Vijaya Karnataka Web SMR-05SGR9


ಕಳೆದ ಎರಡು ದಿನಗಳಿಂದ ಕಾಗೋಡು ತಿಮ್ಮಪ್ಪ ಅವರು ವಿಪರೀತ ಸುಸ್ತು ಹಾಗೂ ಶೀತಬಾಧೆಯಿಂದ ಬಳಲುತ್ತಿದ್ದರು. ಗುರುವಾರ ತಡರಾತ್ರಿ ಸಮಯದಲ್ಲಿ ರಕ್ತದೊತ್ತಡ ಹಾಗೂ ಉಸಿರಾಟದಲ್ಲಿ ತೊಂದರೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಯಿತು.

ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನದ ವರೆಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಿದ ಬಳಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಆರೋಗ್ಯದಲ್ಲಿ ಸುಧಾರಣೆ ಕಾಣಿಸದೆ ಹೋದಲ್ಲಿ ಬೆಂಗಳೂರಿಗೆ ಕರೆದೊಯ್ಯಲು ಕುಟುಂಬದವರು ಮತ್ತು ಕಾಂಗ್ರೆಸ್‌ ಮುಖಂಡರು ನಿರ್ಧರಿಸಿದ್ದರು. ಆದರೆ, ಸಂಜೆ ಹೊತ್ತಿಗೆ ಅವರು ಸಂಪೂರ್ಣ ಚೇತರಿಸಿಕೊಂಡಿದ್ದರು.

ಆಸ್ಪತ್ರೆಗೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಸೇರಿದಂತೆ ಕಾಂಗ್ರೆಸ್‌ ಪ್ರಮುಖರು ಭೇಟಿ ನೀಡಿ ಕಾಗೋಡು ಅವರ ಆರೋಗ್ಯ ವಿಚಾರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ