ಆ್ಯಪ್ನಗರ

ಇಂದು ಕೃಷಿ ವ್ಯವಹಾರ, ರಫ್ತು ಜಾಗೃತಿ ಕಾರ್ಯಕ್ರಮ

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ)ವು ಜಿಲ್ಲಾ ಕೈಗಾರಿಕಾ ಕೇಂದ್ರ, ರಾಜ್ಯ ಹಣಕಾಸು ಸಂಸ್ಥೆ ಮತ್ತು ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಕೃಷಿ ವ್ಯವಹಾರ, ರಫ್ತು ಮತ್ತು ಆಹಾರ ಸಂಸ್ಕರಣಾ ನೀತಿ 2015 ಮತ್ತು ಕೆಎಸ್‌ಎಫ್‌ಸಿ ಹೊಸ ಯೋಜನೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

Vijaya Karnataka 31 Jan 2019, 5:00 am
ಶಿವಮೊಗ್ಗ: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ)ವು ಜಿಲ್ಲಾ ಕೈಗಾರಿಕಾ ಕೇಂದ್ರ, ರಾಜ್ಯ ಹಣಕಾಸು ಸಂಸ್ಥೆ ಮತ್ತು ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಕೃಷಿ ವ್ಯವಹಾರ, ರಫ್ತು ಮತ್ತು ಆಹಾರ ಸಂಸ್ಕರಣಾ ನೀತಿ 2015 ಮತ್ತು ಕೆಎಸ್‌ಎಫ್‌ಸಿ ಹೊಸ ಯೋಜನೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ.
Vijaya Karnataka Web agriculture trade export awareness programme today
ಇಂದು ಕೃಷಿ ವ್ಯವಹಾರ, ರಫ್ತು ಜಾಗೃತಿ ಕಾರ್ಯಕ್ರಮ


ಜಾಗೃತಿ ಕಾರ್ಯಕ್ರಮವು ಜ.31ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಕೈಗಾರಿಕಾ ಸಂಭಾವ್ಯತೆ ಮತ್ತು ಪ್ರದೇಶದ ಸಂಪನ್ಮೂಲಗಳ ಆಧಾರದ ಮೇಲೆ ರಫ್ತು ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದು ಅದರ ಮುಂದುವರಿದ ಸರಣಿಯಾಗಿದೆ ಎಂದು ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎಂ.ಎ.ರಮೇಶ್‌ ಹೆಗ್ಡೆ ತಿಳಿಸಿದರು.

ಪ್ರೆಸ್‌ಟ್ರಸ್ಟ್‌ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕೃಷಿ ವ್ಯವಹಾರ ಮತ್ತು ಆಹಾರ ಸಂಸ್ಕರಣೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಕರ್ನಾಟಕವು ಕೃಷಿ ಮತ್ತು ತೋಟಗಾರಿಕೆ ಸರಕುಗಳನ್ನು ಉತ್ಪಾದಿಸುವ ಪ್ರಮುಖ ರಾಜ್ಯವೆನಿಸಿಕೊಂಡಿದೆ. ಅಕ್ಕಿ ಗಿರಣಿ ಉದ್ಯಮ, ಅಡಕೆ ಹಾಗೂ ಇತರೆ ವಾಣಿಜ್ಯ ಬೆಳೆಗಳಿಗೂ ಮೂಲವಾಗಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಮೂಲಕ ಉದ್ಯಮದ ಅಭಿವೃದ್ಧಿ ಮತ್ತು ಹೊಸ ಬಂಡವಾಳದ ಹೂಡಿಕೆಗೆ ಉತ್ತೇಜನ ನೀಡುವ ವಿಶ್ವಾಸವಿದೆ ಎಂದರು.

ಇದಕ್ಕೆ ಪೂರಕವಾಗಿ ರಾಜ್ಯ ಹಣಕಾಸು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್‌.ಜಿ.ನಿಲೋಗಲ್‌, ಚೆನ್ನೈನ ಇಇಪಿಸಿ ಪ್ರಾದೇಶಿಕ ನಿರ್ದೇಶಕ ಸಿ.ಎಚ್‌.ನಾಡಿಗೇರ್‌, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕೃಷಿ ಎಂಜಿನಿಯರಿಂಗ್‌ ವಿಭಾಗ ಮುಖ್ಯಸ್ಥ ಡಾ. ಕೆ.ಸಿ.ಶಶಿಧರ್‌ ಮಾತನಾಡುವರು. ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಕಾರ್ಯಕ್ರಮ ಉದ್ಘಾಟಿಸುವರು, ಕಾಸಿಯಾ ಅಧ್ಯಕ್ಷ ಬಸವರಾಜ ಎಸ್‌.ಜವಳಿ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕಾಸಿಯಾದ ಜಂಟಿ ಕಾರ್ಯದರ್ಶಿ ಎಸ್‌.ವಿಶ್ವೇಶ್ವರಯ್ಯ, ಕೆಎಸ್‌ಎಫ್‌ಸಿ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್‌.ಎಸ್‌.ಪರಪ್ಪನವರ ಹಾಜರಿದ್ದರು.

-------------------

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ