ಆ್ಯಪ್ನಗರ

ಮಾ. 1ರಿಂದ 31ರವರೆಗೆ ಆಗುಂಬೆ ಘಾಟ್ ರಸ್ತೆ ಸಂಚಾರ ನಿಷೇಧ

ಸಂಚಾರ ನಿಷೇಧ ಮಾರ್ಚ್ 1ರಿಂದ 31ರವರೆಗೆ ಅಥವಾ ಕಾಮಗಾರಿ ಮುಗಿಯುವ ತನಕ ಯಾವುದು ಮೊದಲೋ ಅಲ್ಲಿಯವರೆಗೆ ಜಾರಿಯಲ್ಲಿರುವುದು. ಕಾಮಗಾರಿ ನಡೆಯುವ ವೇಳೆ ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

Vijaya Karnataka Web 23 Feb 2019, 2:31 pm
ಶಿವಮೊಗ್ಗ, ಫೆ.23 (ಕರ್ನಾಟಕ ವಾರ್ತೆ): ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಆದೇಶ ಹೊರಡಿಸಿದ್ದಾರೆ.
Vijaya Karnataka Web Agumbe Ghat.


ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು. ಭಾರಿ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಸುರಿ ಬಸ್‍ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಹೊಸಂಗಡಿ-ಸಿದ್ದಾಪುರ-ಕುಂದಾಪುರ-ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ.

ಸಂಚಾರ ನಿಷೇಧ ಮಾರ್ಚ್ 1ರಿಂದ 31ರವರೆಗೆ ಅಥವಾ ಕಾಮಗಾರಿ ಮುಗಿಯುವ ತನಕ ಯಾವುದು ಮೊದಲೋ ಅಲ್ಲಿಯವರೆಗೆ ಜಾರಿಯಲ್ಲಿರುವುದು. ಕಾಮಗಾರಿ ನಡೆಯುವ ವೇಳೆ ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

ಕಳೆದ ಜುಲೈ 10 ಮತ್ತು 13ರಂದು ಸುರಿದ ಭಾರೀ ಮಳೆಯಿಂದಾಗಿ ಆಗುಂಬೆ ಘಾಟಿಯ 7ನೇ ಮತ್ತು 14ನೇ ತಿರುವಿನಲ್ಲಿ ಮತ್ತು ಆನೆಬಂಡೆ ಬಳಿ ಗುಡ್ಡ ಕುಸಿತ ಉಂಟಾಗಿ ಭಾಗಶಃ ರಸ್ತೆ ಕುಸಿದಿದ್ದು, ಶಾಶ್ವತ ದುರಸ್ತಿ ಕಾಮಗಾರಿಯನ್ನು ಇದೀಗ ಕೈಗೊಳ್ಳಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ