ಆ್ಯಪ್ನಗರ

ಅಮಿತ್‌ ಶಾ ಪುತ್ರನ ಆಸ್ತಿ ತನಿಖೆಗೆ ಒತ್ತಾಯ

ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್‌ಶಾ ಪುತ್ರ ಜಯಾ ಶಾ ಅವರ ದಿಢೀರ್‌ ಆಸ್ತಿ ಏರಿಕೆ ಕುರಿತು ತಕ್ಷಣ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ತಾಲೂಕು ಯುವ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

Vijaya Karnataka 17 Oct 2017, 5:00 am

ತೀರ್ಥಹಳ್ಳಿ: ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್‌ಶಾ ಪುತ್ರ ಜಯಾ ಶಾ ಅವರ ದಿಢೀರ್‌ ಆಸ್ತಿ ಏರಿಕೆ ಕುರಿತು ತಕ್ಷಣ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ತಾಲೂಕು ಯುವ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರಕಾರ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬುದಕ್ಕೆ ಜಯಾ ಶಾ ಪ್ರಕರಣ ಸಾಕ್ಷ್ಯ ಒದಗಿಸಿದಂತಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ಎಂದು ಬರೀ ಸುಳ್ಳು ಭರವಸೆ ನೀಡುತ್ತಿರುವ ಕೇಂದ್ರ ಸರಕಾರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಪುತ್ರನ ಕಂಪನಿ ದಿಢೀರ್‌ ಶ್ರೀಮಂತಿಕೆ ಹೊಂದಿರುವುದನ್ನು ಗಮನಿಸದಿರುವುದು ಏಕೆ ಎಂದು ಪ್ರಶ್ನಿಸಿರುವ ಕಾರ್ಯಕರ್ತರು, ಕೇಂದ್ರ ಸರಕಾರಕ್ಕೆ ನೈಜ ಕಾಳಜಿ ಇದ್ದರೆ ಆಸ್ತಿ ಏರಿಕೆ ಪ್ರಕರಣವನ್ನು ತನಿಖೆಗೆ ಒಳಪಡಿಸಲಿ ಎಂದು ಆಗ್ರಹಿಸಿದರು.

ಈ ಸಂದರ್ಭ ತಾಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷ ಕೆಳಕೆರೆ ಪ್ರದೀಪ್‌, ಮುಖಂಡರಾದ ಶರತ್‌ಲಕ್ಷ್ಮಣ್‌, ಅಮರನಾಥಶೆಟ್ಟಿ, ಹರ್ಷೇಂದ್ರಕುಮಾರ್‌, ದೀಪು ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ