ಆ್ಯಪ್ನಗರ

ಮಂಗನ ಕಾಯಿಲೆಗೆ ಮತ್ತೊಬ್ಬ ವ್ಯಕ್ತಿ ಬಲಿ

ತಾಲೂಕಿನ ಕಾರ್ಗಲ್‌ ವನ್ಯಜೀವಿ ವಿಭಾಗದ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಗೆ ಮೃತಪಡುತ್ತಿರುವವರ ಸರಣಿ ಮುಂದುವರಿದಿದ್ದು, ಬುಧವಾರ ಬೆಳಗ್ಗೆ ನಂದೋಡಿಯ ಕರಿಯಪ್ಪ(50) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Vijaya Karnataka 2 May 2019, 10:46 pm
ಸಾಗರ : ತಾಲೂಕಿನ ಕಾರ್ಗಲ್‌ ವನ್ಯಜೀವಿ ವಿಭಾಗದ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಗೆ ಮೃತಪಡುತ್ತಿರುವವರ ಸರಣಿ ಮುಂದುವರಿದಿದ್ದು, ಬುಧವಾರ ಬೆಳಗ್ಗೆ ನಂದೋಡಿಯ ಕರಿಯಪ್ಪ(50) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಏ. 27ರಂದು ಕೆಎಂಸಿಗೆ ಸೇರಿಸಲ್ಪಟ್ಟಿದ್ದ ಕೃಷಿಕ ಕರಿಯಪ್ಪ ಅವರಲ್ಲಿ ಕೆಎಫ್‌ಡಿ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕರಿಯಪ್ಪ ಸೇರಿದಂತೆ, ಡಿಸೆಂಬರ್‌ನಿಂದ ಈಚೆಗೆ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 21 ಜನ ಮಂಗನ ಕಾಯಿಲೆಗೆ ಮೃತರಾಗಿದ್ದಾರೆ.
Vijaya Karnataka Web another person is killed for monkey sickness
ಮಂಗನ ಕಾಯಿಲೆಗೆ ಮತ್ತೊಬ್ಬ ವ್ಯಕ್ತಿ ಬಲಿ


ತಾಳಗುಪ್ಪದತ್ತ ಕೆಎಫ್‌ಡಿ

ಮಣಿಪಾಲದ ಕಸ್ತೂರ್‌ಬಾ ಆಸ್ಪತ್ರೆಯಲ್ಲಿ ಸೋಮವಾರ ಸಾವನ್ನಪ್ಪಿದ ತಾಳಗುಪ್ಪ ಸಮೀಪದ ಹಿರೇಮನೆಯ ಸುಬ್ಬಮ್ಮ ಶೆಡ್ತಿ ಅವರಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್‌ ಇದ್ದುದು ದೃಢಪಟ್ಟಿದೆ. ಅವರ ರಕ್ತ ಪರೀಕ್ಷೆ ವರದಿ ಪಾಸೀಟಿವ್‌ ಬಂದಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಮುನಿವೆಂಕಟರಾಜು ಪತ್ರಿಕೆಗೆ ತಿಳಿಸಿದ್ದಾರೆ. ಕಳೆದ ಐದು ತಿಂಗಳಿನಿಂದ ಸಾಗರ ತಾಲೂಕನ್ನು ಕಾಡುತ್ತಿರುವ ಮಂಗನ ಕಾಯಿಲೆ ಈಗ ತಾಲೂಕಿನ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯನ್ನು ದಾಟಿ, ಸುಮಾರು 20 ಕಿ.ಮೀ. ದೂರದ ತಲವಾಟ ಗ್ರಾಮ ಪಂಚಾಯಿತಿಯ ಮಹಿಳೆಯನ್ನು ಬಲಿ ತೆಗೆದುಕೊಂಡಿರುವುದು ತಾಲೂಕಿನ ಜನರಲ್ಲಿ ರೋಗ ಭಿತಿ ಹೆಚ್ಚಿಸಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ