ಆ್ಯಪ್ನಗರ

ಕಸಾಪ ಅಧ್ಯಕ್ಷರಾಗಿ ಅಪೇಕ್ಷ ಮಂಜುನಾಥ್‌

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ನೂತನ ಅಧ್ಯಕ್ಷರಾಗಿ ದೈಹಿಕ ಶಿಕ್ಷಣ ಶಿಕ್ಷಕ ಅಪೇಕ್ಷ ಮಂಜುನಾಥ್‌ ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.

Vijaya Karnataka 28 Sep 2019, 5:00 am
ಭದ್ರಾವತಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ನೂತನ ಅಧ್ಯಕ್ಷರಾಗಿ ದೈಹಿಕ ಶಿಕ್ಷಣ ಶಿಕ್ಷಕ ಅಪೇಕ್ಷ ಮಂಜುನಾಥ್‌ ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.
Vijaya Karnataka Web 27BDVT2_46


ಅಧ್ಯಕ್ಷರಾಗಿದ್ದ ಬೇಲಿಮಲ್ಲೂರು ಎಂ. ನಾಗಪ್ಪ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಪರಿಷತ್‌ ಜಿಲ್ಲಾಧ್ಯಕ್ಷ ಡಿ.ಬಿ. ಶಂಕರಪ್ಪ ಅವರು ಅಪೇಕ್ಷ ಮಂಜುನಾಥ್‌ ಅವರನ್ನು ನೇಮಕ ಮಾಡಿದ್ದಾರೆ.

ಕಾಗದನಗರ ಪ್ರೌಢಶಾಲೆಯಲ್ಲಿದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ್‌, ಜ್ಯೂನಿಯರ್‌ ವಿಷ್ಣುವರ್ಧನ್‌ ಎಂದೇ ಖ್ಯಾತಿ ಪಡೆದಿದ್ದಾರೆ. ನೃತ್ಯ ಕಲಾವಿದರಾಗಿ, ಸಾಹಿತ್ಯ ಪರಿಷತ್‌ನಲ್ಲಿಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಹಾಗು ಹಲವಾರು ಸಂಘ ಸಂಸ್ಥೆಗಳಲ್ಲಿಸೇವೆ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ