ಆ್ಯಪ್ನಗರ

ತುಂಬ್ರಮನೆ ಸೇತುವೆ ರಿಪೇರಿಗೆ ಆರಗ ಸೂಚನೆ

ತೀರ್ಥಹಳ್ಳಿ ತಾಲೂಕಿನ ಶೇಡ್ಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಂಬ್ರಮನೆ ಸೇತುವೆ ದುರಸ್ತಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುವಂತೆ ಶಾಸಕ ಆರಗ ಜ್ಞಾನೇಂದ್ರ ಸೂಚನೆ ನೀಡಿದರು.

Vijaya Karnataka 29 Jul 2019, 5:00 am
ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಶೇಡ್ಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಂಬ್ರಮನೆ ಸೇತುವೆ ದುರಸ್ತಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುವಂತೆ ಶಾಸಕ ಆರಗ ಜ್ಞಾನೇಂದ್ರ ಸೂಚನೆ ನೀಡಿದರು.
Vijaya Karnataka Web araga indicate to repair bridge
ತುಂಬ್ರಮನೆ ಸೇತುವೆ ರಿಪೇರಿಗೆ ಆರಗ ಸೂಚನೆ


ಬೆಂಗಳೂರಿನಿಂದ ಭಾನುವಾರ ಆಗಮಿಸಿದ ಜ್ಞಾನೇಂದ್ರ ಅವರು, ಕಾಮಗಾರಿ ವೀಕ್ಷಿಸಿ ಅಧಿಕಾರಿಗಳೊಂದಿಗೆ ಮಾತನಾಡಿದರು.

ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಅವರು, ಸೇತುವೆ ದುರಸ್ತಿಗೆ 3 ಲಕ್ಷ ರೂ. ಸರಕಾರದಿಂದ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದರು. ಕಾಮಗಾರಿ ಶುರುವಾಗಿದ್ದು, ಕಳೆದ ವಾರ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಭೇಟಿ ನೀಡಿದ್ದರು.

===

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ