ಆ್ಯಪ್ನಗರ

ತಂಬಾಕು ಪದಾರ್ಥ ಮಾರಾಟ ಅಂಗಡಿ ಮೇಲೆ ದಾಳಿ

ನಗರದ ವಿವಿಧೆಡೆ ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿರುವ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ 371 ಪ್ರಕರಣ ದಾಖಲಿಸಿ 21.700 ರೂ ದಂಡ ವಸೂಲಿ ಮಾಡಿದ ಪ್ರಕರಣ ಶನಿವಾರ ನಡೆದಿದೆ.

Vijaya Karnataka 26 May 2019, 5:00 am
ಭದ್ರಾವತಿ: ನಗರದ ವಿವಿಧೆಡೆ ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿರುವ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ 371 ಪ್ರಕರಣ ದಾಖಲಿಸಿ 21.700 ರೂ ದಂಡ ವಸೂಲಿ ಮಾಡಿದ ಪ್ರಕರಣ ಶನಿವಾರ ನಡೆದಿದೆ.
Vijaya Karnataka Web SMR-25BDVT2


ತಹಸೀಲ್ದಾರ್‌ ಸೋಮಶೇಖರ್‌ ನೇತೃತ್ವದ ತಂಡ ದಾಳಿ ನಡೆಸಿದ್ದು, ತಾಲುಕಿನ ತರೀಕೆರೆ ರಸ್ತೆ, ಹೊಸಮನೆ ಮುಖ್ಯ ರಸ್ತೆ, ತಾಲೂಕು ಕಚೇರಿ ರಸ್ತೆ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ದಾಳಿ ನಡೆಸಿ ತಂಬಾಕು ಉತ್ಪನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಯಿತು. ನಂತರ ತಂಬಾಕು ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಸಾರ್ವಜನಿಕರು ಹಾಗೂ ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ತಾಪಂ ಇಒ ತಮ್ಮಣ್ಣಗೌಡ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಬಿ.ಎಸ್‌.ಶಂಕರಪ್ಪ, ಟಿಎಚ್‌ಒ ಡಾ.ಎಂ.ಆರ್‌.ಗಾಯಿತ್ರಿ, ತಂಬಾಕು ನಿಯಂತ್ರಣಾಧಿಕಾರಿ ಹೇಮಂತರಾಜ್‌ ಅರಸ್‌, ಗ್ರಾಮಾಂತರ ಸಿಪಿಐ ಯೋಗೇಶ್‌, ಪ್ರಕಾಶ್‌, ಹಿರಿಯ ಆರೋಗ್ಯ ನಿರೀಕ್ಷ ಕ ನೀಲೇಶ್‌ ರಾಜ್‌, ಸೋಮಶೇಖರ್‌, ಬಸವರಾಜ್‌, ಶಶಿಕುಮಾರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ