ಆ್ಯಪ್ನಗರ

ಎಟಿಎಂ ಕಳವಿಗೆ ಯತ್ನ: ಇಬ್ಬರ ಬಂಧನ

ತಾಲೂಕಿನ ಮಾಸೂರಿನಲ್ಲಿ ಎಟಿಎಂ ಹಣ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Vijaya Karnataka 4 Aug 2019, 5:00 am
ಸಾಗರ:ತಾಲೂಕಿನ ಮಾಸೂರಿನಲ್ಲಿ ಎಟಿಎಂ ಹಣ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
Vijaya Karnataka Web SMR-03SGR5


ಜಯರಾಮ ಹಾಗೂ ಪವನ ಎಂಬುವರನ್ನು ಬಂಧಿಸಿದ್ದು, ಅವರಿಂದ ಕಳ್ಳತನಕ್ಕೆ ಬಳಸಿದ್ದ ಕಬ್ಬಿಣದ ರಾಡು, ಕಟ್ಟಿಂಗ್‌ ಮಶಿನ್‌ ಹಾಗೂ ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಸರ ಅಪಹರಣಕಾರರ ಬಂಧನ :
ಆವಿನಹಳ್ಳಿಯಲ್ಲಿ ಮಹಿಳೆಯ ಚಿನ್ನದ ಸರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನದ ಸರ ಅಪಹರಿಸಿದ್ದ ಆರೋಪಿಗಳಾದ ಪವನ ಮನೆಘಟ್ಟ ಹಾಗೂ ಮಂಜಪ್ಪ ಬಿಳಿಸಿರಿ ಎಂಬುವವರನ್ನು ಬಂಧಿಸಿದ್ದು, 45 ಗ್ರಾಂ ತೂಕದ ಚಿನ್ನದ ಸರವನ್ನು ವಶ ಪಡಿಸಿಕೊಂಡಿದ್ದಾರೆ.

ಎಎಸ್‌ಪಿ ಯತೀಶ್‌ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಸುನೀಲ್‌ ಕುಮಾರ್‌, ಸಬ್‌ ಇನ್ಸ್‌ಪೆಕ್ಟರ್‌ ಸುಜಾತ, ಸಿಬ್ಬಂದಿ ಫೈರೋಜ, ಗಿರೀಶ್‌, ರಾಘವೇಂದ್ರ ಶೆಟ್ಟಿ, ಗಿರಿಸ್ವಾಮಿ, ಶಿವನ್‌ ಗೌಡ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ