ಆ್ಯಪ್ನಗರ

ಶಿಕ್ಷಕರ ವರ್ಗಾವಣೆ ಲೋಪ ಸರಿಪಡಿಸಲು ಪ್ರಯತ್ನ

ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಸಂಬಂಧಪಟ್ಟಂತೆ ಎದುರಾಗಿರುವ ಲೋಪ ದೋಷಗಳನ್ನು ಸರಿಪಡಿಸಲಾಗುವುದು ಎಂದು ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಭರವಸೆ ನೀಡಿದರು.

Vijaya Karnataka 17 Aug 2019, 5:00 am
ಶಿವಮೊಗ್ಗ : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಸಂಬಂಧಪಟ್ಟಂತೆ ಎದುರಾಗಿರುವ ಲೋಪ ದೋಷಗಳನ್ನು ಸರಿಪಡಿಸಲಾಗುವುದು ಎಂದು ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಭರವಸೆ ನೀಡಿದರು.
Vijaya Karnataka Web attempting to correct teacher transfer omission
ಶಿಕ್ಷಕರ ವರ್ಗಾವಣೆ ಲೋಪ ಸರಿಪಡಿಸಲು ಪ್ರಯತ್ನ


ಸರಕಾರಿ ನೌಕರರ ಸಂಘ, ವಿವಿಧ ಸಂಘಟನೆ ಹಾಗೂ ಅಭಿಮಾನಿಗಳ ಬಳಗದ ವತಿಯಿಂದ ನಗರದ ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಶಿಕ್ಷಕರು ವರ್ಗಾವಣೆಗೋಸ್ಕರ ಪರದಾಡುತ್ತಿದ್ದಾರೆ. ಇದರ ಬಗ್ಗೆ ಗಮನಹರಿಸಿ ಲೋಪಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು.

ಕೆಜೆಡಿ ಸರಕಾರಿ ನೌಕರರ ವಿಮಾ ಇಲಾಖೆಯನ್ನು ಸಂಪೂರ್ಣ ಗಣಕೀಕರಣಗೊಳಿಸಲಾಗುವುದು, ಪೊಲೀಸ್‌ ಇಲಾಖೆಯಲ್ಲಿರುವಂತೆಯೇ ಇನ್ನುಳಿದ ಇಲಾಖೆಯ ಸರಕಾರಿ ನೌಕರರಿಗೂ ವೈದ್ಯಕೀಯ ಚಿಕಿತ್ಸೆ ಸವಲತ್ತು ಸಿಗುವಂತೆ ಮಾಡಲಾಗುವುದು ಎಂದರು.

ಗೌರವಾಧ್ಯಕ್ಷ ರಮೇಶ್‌, ರಾಜ್ಯ ಪರಿಷತ್‌ ಸದಸ್ಯ ಮೋಹನ್‌ಕುಮಾರ್‌, ಕಾರ್ಯದರ್ಶಿ ಶಾಂತರಾಜು, ಖಜಾಂಚಿ ರಾಘು, ಎಲ್ಲ ತಾಲೂಕುಗಳ ಅಧ್ಯಕ್ಷರು ಉಪಸ್ಥಿತರಿದ್ದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ