ಆ್ಯಪ್ನಗರ

ಆಡಿಯೊ ಪ್ರಕರಣ: ಬಿಎಸ್‌ವೈ ವಿರುದ್ಧ ದೂರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ಸಲ್ಲಿಸಿದ್ದಾರೆ.

Vijaya Karnataka 13 Feb 2019, 5:00 am
ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ಸಲ್ಲಿಸಿದ್ದಾರೆ.
Vijaya Karnataka Web BNG-SMG-1202-2-15-12SMG5


ಆಪರೇಷನ್‌ ಕಮಲಕ್ಕೆ ಸಂಬಂಧಿಸಿ ಯಡಿಯೂರಪ್ಪ ಮತ್ತು ಜೆಡಿಎಸ್‌ ಶಾಸಕರ ಪುತ್ರನ ನಡುವಿನ ಮಾತುಕತೆಯ ಟೇಪ್‌ ಬಿಡುಗಡೆ ಮಾಡಲಾಗಿದ್ದು, ಸಾಂವಿಧಾನಿಕವಾಗಿ ರಚನೆಯಾಗಿರುವ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಸತತ ಆರು ತಿಂಗಳಿಂದ ಪ್ರಯತ್ನಿಸಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರತಿ ಶಾಸಕರಿಗೆ 10 ಕೋಟಿ ರೂ. ಕೊಡುತ್ತೇನೆಂಬ ಆಮಿಷವೊಡ್ಡಿ ಆಡಳಿದ ಪಕ್ಷ ದ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವುದು ಅಕ್ಷ ಮ್ಯ. ಆಡಿಯೊದಲ್ಲಿ ಸಭಾಧ್ಯಕ್ಷರು, ದೇಶದ ಪ್ರಧಾನಿ ಹಾಗೂ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮೀತ್‌ ಶಾ ಅವರ ಹೆಸರುಗಳನ್ನೂ ಪ್ರಸ್ತಾಪಿಸಲಾಗಿದೆ. ಇದರಿಂದ, ನಾಗರಿಕರು ಗೊಂದಲಕ್ಕೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾತಂತ್ರ ರಕ್ಷ ಣೆ ಇಂದು ದೇಶದಲ್ಲಿನ ಅತ್ಯಂತ ಜರೂರಿ ಕೆಲಸವಾಗಿದೆ. ಪ್ರಜಾತಂತ್ರವಿದ್ದರೆ ಮಾತ್ರ ಸರಕಾರಗಳು ಕೆಲಸ ಮಾಡಬಲ್ಲವು. ಬಿಜೆಪಿಯು ಇಂದಿನ ಕಾರ್ಯಸೂಚಿ ಸಂವಿಧಾನಿಕ ಸಂಸ್ಥೆಗಳು ಮತ್ತು ಶಾಸನ ಸಭೆಗಳ ಮೇಲೆ ಪಿತೂರಿ ನಡೆಸುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದೆ. ಸ್ವಾತಂತ್ರಕ್ಕೆ ಧಕ್ಕೆ ಉಂಟುಮಾಡುವ ಪ್ರಯತ್ನಗಳಾಗಿವೆ ಎಂದು ಕೆಪಿಸಿಸಿ ಕಾರ್ಯದರ್ಶಿ ಎಚ್‌.ಸಿ.ಯೋಗೀಶ್‌ ತಿಳಿಸಿದ್ದಾರೆ.

ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸುವ ನಿಟ್ಟಿನಲ್ಲಿ ಬಿ.ಎಸ್‌.ಯಡಿಯೂರಪ್ಪ ಮತ್ತು ಬಿಜೆಪಿಯ ಈ ಅಪಾಯಕಾರಿ ಕಾರ್ಯಸೂಚಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್‌, ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ.ಗಿರೀಶ್‌, ಆರ್‌.ಕಿರಣ್‌, ಟಿ.ವಿ.ರಂಜಿತ್‌, ಡಿ.ಆರ್‌. ಗಿರೀಶ್‌, ಶ್ರೀಧರ್‌, ಮುರಳಿ, ರಾಹುಲ್‌, ಚಿನ್ನು, ಶರತ್‌, ಪುನೀತ್‌, ನದೀಮ್‌ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ