ಆ್ಯಪ್ನಗರ

ಲೋಕಸಭಾ ಚುನಾವಣೆ ಸೋಲಿನಿಂದ‌ ಸಿಎಂ ಹತಾಶ: ಬಿಎಸ್‌ವೈ

ಮುಖ್ಯಮಂತ್ರಿ ಕುಮಾಸ್ವಾಮಿ 48 ಸಾವಿರ ಕೋಟಿ ರೂಪಾಯಿಯಷ್ಟು ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು.

Vijaya Karnataka Web 27 Jun 2019, 12:35 pm
ಶಿಮಮೊಗ್ಗ: 17ನೇ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾರಣ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ‌ ಕೊಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
Vijaya Karnataka Web bsy


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ‌ ಬರಗಾಲದ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಕುಡಿಯುವ ನೀರಿನ ‌ಸಮಸ್ಯೆ ಎದುರಾಗಿದೆ. ಇದು ಗ್ರಾಮ ವಾಸ್ತವ್ಯ ಮಾಡುವ ಸಮಯವಲ್ಲ. ರಾಜ್ಯದಲ್ಲಿ‌ ಇರುವಂತ‌ ಬರಗಾಲದ ಬಗ್ಗೆ ಗಮನ ಹರಿಸಿ ಎಂದು ಕಿವಿಮಾತು ಹೇಳಿದ್ದಾರೆ.

ಮುಖ್ಯಮಂತ್ರಿ ಕುಮಾಸ್ವಾಮಿ 48 ಸಾವಿರ ಕೋಟಿ ರೂಪಾಯಿಯಷ್ಟು ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೀಗ 15 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಲಾಗಿದೆ ಎನ್ನುತ್ತಿದ್ದಾರೆಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲ.ನಿನ್ನೆ (ಬುಧವಾರ) ಬಿಜೆಪಿ ಶಾಸಕ ಶಿವನಗೌಡ ಅವರನ್ನು ಗೂಂಡಾ ಎಂದು ಕರೆದಿದ್ದಾರೆ. ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದು, ಸಿಎಂ ಸರ್ವಾಧಿಕಾರಿಯಂತೆ ವರ್ತಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗ್ರಾಮ ವಾಸ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವುದು ನಾವಲ್ಲ. ಯಾವ ಸಮಯದಲ್ಲಿ ಗ್ರಾಮ ವಾಸ್ತವ್ಯ ಮಾಡಬೇಕು ಎನ್ನುವುದನ್ನು ತಿಳಿಯಿರಿ.
ರಾಜ್ಯ ಪ್ರವಾಸ ಕೈಗೊಳ್ಳುವ ಮೂಲಕ ಎಲ್ಲ ಸಮಸ್ಯೆ ಗಳನ್ನು ಅರಿತು ನಂತರ ಗ್ರಾಮ ವಾಸ್ತವ್ಯ ಮಾಡಲಿ ಎಂದು ಬಿಎಸ್‌ವೈ ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ