ಆ್ಯಪ್ನಗರ

ಮಧು ಬಂಗಾರಪ್ಪ ‘ಇಂಪೋರ್ಟೆಡ್’ ಅಭ್ಯರ್ಥಿ: ಬಿ.ವೈ.ರಾಘವೇಂದ್ರ ಲೇವಡಿ

ಚುನಾವಣೆ ಬಂದಾಗ ಮಾತ್ರ ಕ್ಷೇತ್ರಕ್ಕೆ ಬರುವವರು ‘ಇಂಪೋರ್ಟ್ ರಾಜಕಾರಣಿ’ ವಾಗ್ದಾಳಿ ಮಾಡಿದರು.

Vijaya Karnataka Web 11 Mar 2019, 10:00 pm
ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಮೈತ್ರಿಕೂಟ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಧು ಬಂಗಾರಪ್ಪ ಅವರು ‘ಇಂಪೋರ್ಟೆಡ್’ ಎಂದು ಸಂಸದ ಬಿ.ವೈ. ರಾಘವೇಂದ್ರ ಲೇವಡಿ ಮಾಡಿದರು.
Vijaya Karnataka Web raghavendra


ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಬಂದಾಗ ಮಾತ್ರ ಕ್ಷೇತ್ರಕ್ಕೆ ಬರುವವರು ‘ಇಂಪೋರ್ಟ್ ರಾಜಕಾರಣಿ’ ವಾಗ್ದಾಳಿ ಮಾಡಿದರು.

ನನ್ನ ಮೇಲೆ ಜನಾಶೀರ್ವಾದವಿದೆ

ಶಿವಮೊಗ್ಗ ಕ್ಷೇತ್ರದಲ್ಲಿದ್ದು ಅವರ ಸೇವೆ ಮಾಡುವ ಅಭ್ಯರ್ಥಿಗೆ ಜನ ಆಶೀರ್ವಾದ ಮಾಡುವುದರಲ್ಲಿ ಸಂದೇಹವೇ ಇಲ್ಲ. ಚುನಾವಣೆ ಸಮಯದಲ್ಲಿ ಕ್ಷೇತ್ರಕ್ಕೆ ಬರುವವರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

‘ಸೂರ್ಯಚಂದ್ರ ಇರುವುದು ಎಷ್ಟು ನಿಜವೋ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ.’ ಪ್ರತಿಪಕ್ಷಗಳು ಈಗ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಮಾಡುವುದರೊಳಗೆ ಚುನಾವಣೆಯೇ ಪೂರ್ಣಗೊಳ್ಳುತ್ತದೆ ಎಂದು ಕಿಚಾಯಿಸಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದೇಶದಲ್ಲಿ 350 ರಿಂದ 400 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ