ಆ್ಯಪ್ನಗರ

Night Party in Shivamogga: ಶಿವಮೊಗ್ಗದಲ್ಲಿ ಮಹಿಳೆಯರ ನೈಟ್ ಪಾರ್ಟಿ ಮೇಲೆ‌ ಬಜರಂಗ ದಳ ಕಾರ್ಯಕರ್ತರ ದಾಳಿ

Bajrang Dal in Shivamogga: ಭಾರತೀಯ ಸಂಸ್ಕೃತಿಗೆ ಮಹಿಳೆಯರ ನೈಟ್‌ ಪಾರ್ಟಿಗಳು ಧಕ್ಕೆ ತರುತ್ತವೆ ಎಂದು ಬಜರಂಗ ದಳ ಆರೋಪಿದ್ದು, ಶಿವಮೊಗ್ಗದಲ್ಲಿ ಪಾರ್ಟಿ ನಡೆಯುತ್ತಿದ್ದ ಹೋಟೆಲ್‌ವೊಂದರ ಮೇಲೆ ದಾಳಿ ನಡೆಸಿದೆ. ಪೊಲೀಸರಿಗೆ ಮಾಹಿತಿ ನೀಡಿ, ಅವರೊಂದಿಗೆ ಹೋಟೆಲ್‌ಗೆ ಬಂದು ಪಾರ್ಟಿಯಲ್ಲಿದ್ದ ಮಹಿಳೆಯರನ್ನು ಹೊರ ಕಳುಹಿಸಿದ್ದಾರೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.

Edited byಹೇಮಂತ್ ಕುಮಾರ್ ಎಸ್ | Vijaya Karnataka Web 18 Mar 2023, 12:34 am

ಹೈಲೈಟ್ಸ್‌:


  • ಕುವೆಂಪು ರಸ್ತೆಯ ಹೋಟೆಲ್‌ವೊಂದರಲ್ಲಿ ನಡೆಯುತ್ತಿದ್ದ ಪಾರ್ಟಿ
  • ಮಹಿಳೆಯರ ರಾತ್ರಿ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರ ವಿರೋಧ
  • ಪೊಲೀಸರ ಜೊತೆಗೆ ಹೊಟೇಲ್‌ಗೆ ಆಗಮಿಸಿದ ಬಜರಂಗ ದಳ ಕಾರ್ಯಕರ್ತರು
  • ಭಾರತೀಯ ಸಂಸ್ಕೃತಿಗೆ ಧಕ್ಕೆ ಎಂದು ಆರೋಪ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Bajrang dal members
ಶಿವಮೊಗ್ಗ ಹೋಟೆಲ್‌ವೊಂದರಲ್ಲಿ ನಡೆಯುತ್ತಿದ್ದ ಮಹಿಳೆಯರ ನೈಟ್‌ ಪಾರ್ಟಿ ವಿರೋಧಿಸಿ ಹೊರ ಬರುತ್ತಿರುವ ಬಜರಂಗ ದಳ ಕಾರ್ಯಕರ್ತರು
ಶಿವಮೊಗ್ಗ: ಮಹಿಳೆಯರು ರಾತ್ರಿ ಪಾರ್ಟಿ ಮಾಡುತ್ತಿರುವುದಾಗಿ ಆರೋಪಿಸಿದ ಬಜರಂಗ ದಳ‌‌ ಕಾರ್ಯಕರ್ತರು ಶುಕ್ರವಾರ ಕುವೆಂಪು ರಸ್ತೆಯ ಹೋಟೆಲ್‌ವೊಂದರಲ್ಲಿ ದಾಳಿ ನಡೆಸಿದ ಘಟನೆ ನಡೆದಿದೆ.
ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ, ಮಹಿಳೆಯರನ್ನು ಹೋಟೆಲ್‌ನಿಂದ ಹೊರಗೆ ಕಳುಹಿಸಿದ್ದಾರೆ. ಮಹಿಳೆಯರ ರಾತ್ರಿ ಪಾರ್ಟಿ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರ ಜೊತೆಗೆ ಹೊಟೇಲ್‌ಗೆ ಆಗಮಿಸಿದ ಬಜರಂಗದಳ ಕಾರ್ಯಕರ್ತರು, ಪಾರ್ಟಿ ನಿಲ್ಲಿಸುವಂತೆ ಹೊಟೇಲ್ ಸಿಬ್ಬಂದಿಗೆ ಸೂಚಿಸಿದ್ದಾರೆ.
Araga Jnanendra Controversy: ಗುಳಿಗ ದೈವಕ್ಕೆ ಅಪಮಾನ ಮಾಡಿದ್ರಾ ಆರಗ ಜ್ಞಾನೇಂದ್ರ, ಇಷ್ಟಕ್ಕೂ ನಡೆದಿದ್ದೇನು? ಇಲ್ಲಿದೆ ವಿವರ
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, 'ಮಹಿಳೆಯರ ನೈಟ್ ಪಾರ್ಟಿ ಬಗ್ಗೆ ಒಂದು ವಾರದ ಮೊದಲೇ ಪೊಲೀಸರ ಗಮನಕ್ಕೆ ತರಲಾಗಿತ್ತು. ಮಲೆನಾಡು ಭಾಗದಲ್ಲಿ ಇಂತಹ ಪಾರ್ಟಿಗಳನ್ನು ನಡೆಸಬಾರದು ಎಂದು ತಿಳಿಸಿದ್ದೆವು. ಆದರೆ, ಅದನ್ನು ಮೀರಿ ಪಾರ್ಟಿ ಮಾಡಿದ್ದಾರೆ. ಆದ್ದರಿಂದ ನಾವು ಪೊಲೀಸ್ ಇಲಾಖೆ ಗಮನಕ್ಕೆ ತಂದು, ದೊಡ್ಡಪೇಟೆ ಠಾಣೆ ಪೊಲೀಸರೊಂದಿಗೆ ಇಲ್ಲಿಗೆ ಬಂದಿದ್ದೇವೆ. ಭಾರತೀಯ ಸಂಸ್ಕೃತಿಗೆ ಧಕ್ಕೆ ತರುವ ಪಾರ್ಟಿಯನ್ನು ಬಜರಂಗದಳದ ವತಿಯಿಂದ ನಿಲ್ಲಿಸಿದ್ದೇವೆ' ಎಂದು ತಿಳಿಸಿದರು.

ಮಹಿಳೆ ಆಕಾಶದೆತ್ತರಕ್ಕೆ ಬೆಳೆದರೂ ಬಿಡದ ಸಂಕಷ್ಟ

ಶಿವಮೊಗ್ಗ: ಮಹಿಳೆ ಅಡುಗೆ ಮನೆಯಿಂದ ಆಕಾಶದೆತ್ತರಕ್ಕೆ ಬೆಳೆದಿದ್ದು, ಕುಟುಂಬಕ್ಕಾಗಿ ತನ್ನತನವನ್ನೇ ಮರೆಮಾಡಿ ಬದುಕುವ ತ್ಯಾಗಮಯಿಯಾಗಿದ್ದಾಳೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಸಂಗೀತ ಅಭಿಪ್ರಾಯಪಟ್ಟರು.

ಶಿವಮೊಗ್ಗ ಮಲ್ಟಿಪರ್ಪಸ್‌ ಸೋಷಿಯಲ್‌ ಸರ್ವಿಸ್‌ ಸೊಸೈಟಿ ಹಾಗೂ ಕುಂಸಿ ಸ್ತ್ರೀ ಬಂಧು ಸ್ವ-ಸಹಾಯ ಗುಂಪುಗಳ ಒಕ್ಕೂಟ ಆಶ್ರಯದಲ್ಲಿ ಕುಂಸಿಯ ರೈತ ಸಂಪರ್ಕ ಭವನದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿಅವರು ಮಾತನಾಡಿದರು.
Shivamogga Jaggery: ಸ್ವರೂಪ ಬದಲಿಸಿದ ಆಲೆಮನೆ, ಮಲೆನಾಡಿನಲ್ಲಿ ಮೊಳಗದ ಕೋಣನ ಕೂಗು, ಕಬ್ಬಿನಗದ್ದೆಗಳ ಬಳಿ ಯಂತ್ರಗಳ ಸದ್ದು
ಮಹಿಳೆ ಸಾಕಷ್ಟು ಸಾಧನೆಗಳನ್ನು ಮಾಡಿದರೂ ಪ್ರಾಚೀನ ಕಾಲದಿಂದ ಪ್ರಸ್ತುತದವರೆಗೆ ಮಹಿಳಾ ಸಮೂಹ ದೌರ್ಜನ್ಯಕ್ಕೆ ಒಳಗಾಗುತ್ತಲೇ ಇದೆ. ವೇದಗಳ ಕಾಲದಲ್ಲಿಸ್ತ್ರೀಗೆ ಯಾವ ಅಸ್ತಿತ್ವವಿರಲಿಲ್ಲ. ಆಸ್ತಿಯಲ್ಲಿ ಮಹಿಳೆಗೆ ಪಾಲಿರಲಿಲ್ಲ. ಮಧ್ಯಕಾಲೀನ ಯುಗದಲ್ಲಿಅನಿಷ್ಟ ಪದ್ಧತಿಗಳ ಪ್ರಾರಂಭದಿಂದ ವರದಕ್ಷಿಣೆ ಪಿಡುಗು, ಸತಿಪದ್ಧತಿ, ದೇವದಾಸಿ ಪದ್ಧತಿ ಸೇರಿದಂತೆ ನಾನಾ ಸಂಕಷ್ಟಗಳಲ್ಲಿ ಮಹಿಳೆ ನೊಂದಿದ್ದಾಳೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ರಂಗನಾಥ್‌, ಮಹಿಳೆಯರು ಕೇವಲ ನಾಲ್ಕು ಗೋಡೆಗೆ ಸೀಮಿತವಾಗಿರದೆ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಸ್ತ್ರೀ ಬಂಧು ಒಕ್ಕೂಟದ ಅಧ್ಯಕ್ಷೆ ಬೆನಕಮ್ಮ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ನಿರ್ದೇಶಕ ಫಾದರ್‌ ಕ್ಲಫರ್ಡ ರೋಷನ್‌ ಪಿಂಟೋ ಇತರರಿದ್ದರು. ರುಕ್ಷಾನ ಬಾನು ಸ್ವಾಗತಿಸಿ, ವೀಣಾ ವಂದಿಸಿದರು. ಶಮೀಮ್‌ ಬಾನು ನಿರೂಪಿಸಿದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ