ಆ್ಯಪ್ನಗರ

ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಆಪ್ತ ಸಹಾಯಕ 25 ಲಕ್ಷ ರೂ. ನಗದು ಸಮೇತ ಸಿಕ್ಕಿ ಬಿದ್ದಿರುವ ಹಿನ್ನೆಲೆಯಲ್ಲಿ ಸಚಿವ ಪುಟ್ಟರಂಗ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೈತಿಕತೆ ಪ್ರದರ್ಶಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್‌ ಆಗ್ರಹಿಸಿದರು.

Vijaya Karnataka 8 Jan 2019, 5:00 am
ಸಾಗರ: ಆಪ್ತ ಸಹಾಯಕ 25 ಲಕ್ಷ ರೂ. ನಗದು ಸಮೇತ ಸಿಕ್ಕಿ ಬಿದ್ದಿರುವ ಹಿನ್ನೆಲೆಯಲ್ಲಿ ಸಚಿವ ಪುಟ್ಟರಂಗ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೈತಿಕತೆ ಪ್ರದರ್ಶಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್‌ ಆಗ್ರಹಿಸಿದರು.
Vijaya Karnataka Web bjp protests demanding resignation of putturangaspetty
ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ


ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಮತ್ತು ರಾಜ್ಯ ಸರಕಾರ ಹೆಚ್ಚಿಸಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಇಳಿಸಬೇಕೆಂದು ಆಗ್ರಹಿಸಿ ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಆರ್‌.ಶ್ರೀನಿವಾಸ್‌ ಮಾತನಾಡಿ, ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಾದಾಗ ಕಾಂಗ್ರೆಸ್‌ ಅನಗತ್ಯವಾಗಿ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿತ್ತು. ಈಗ ಕೇಂದ್ರ ಸರಕಾರ ತೈಲಬೆಲೆ ಕಡಿಮೆ ಮಾಡಿದೆ. ಆದರೆ, ರಾಜ್ಯ ಸರಕಾರ ಬೆಲೆ ಹೆಚ್ಚಳ ಮಾಡಿ, ಜನರನ್ನು ವಂಚಿಸುತ್ತಿದೆ ಎಂದು ದೂರಿದರು.

ಬಿಜೆಪಿ ಪ್ರಮುಖರಾದ ಕೆ.ಆರ್‌.ಗಣೇಶ್‌ಪ್ರಸಾದ್‌, ವಿ.ಮಹೇಶ್‌, ಕುಸುಮ ಸುಬ್ಬಣ್ಣ, ಸತೀಶಬಾಬು, ಎಸ್‌.ವಿ.ಕೃಷ್ಣಮೂರ್ತಿ, ಅರವಿಂದ ರಾಯ್ಕರ್‌, ಸಂತೋಷ್‌ ಶೇಟ್‌, ಎಸ್‌.ಎಲ್‌.ಮಂಜುನಾಥ್‌, ಶ್ರೀಧರ ಸಾಗರ್‌, ನಾಗರತ್ನ, ಉಮೇಶ್‌ ಚೌಟಗಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ