ಆ್ಯಪ್ನಗರ

ಬಿಜೆಪಿ ರೋಡ್‌ ಶೋ

ಬಹಿರಂಗ ಪ್ರಚಾರದ ಕೊನೆ ದಿನವಾದ ಭಾನುವಾರ ನಗರದಲ್ಲಿ ಬಿಜೆಪಿಯಿಂದ 'ವಿಜಯದೆಡೆಗೆ ನಡಿಗೆ' ಹೆಸರಿನಲ್ಲಿ ರೋಡ್‌ ಶೋ ನಡೆಸಲಾಯಿತು.

Vijaya Karnataka 22 Apr 2019, 5:00 am
ಶಿವಮೊಗ್ಗ: ಬಹಿರಂಗ ಪ್ರಚಾರದ ಕೊನೆ ದಿನವಾದ ಭಾನುವಾರ ನಗರದಲ್ಲಿ ಬಿಜೆಪಿಯಿಂದ 'ವಿಜಯದೆಡೆಗೆ ನಡಿಗೆ' ಹೆಸರಿನಲ್ಲಿ ರೋಡ್‌ ಶೋ ನಡೆಸಲಾಯಿತು.
Vijaya Karnataka Web bjp road show
ಬಿಜೆಪಿ ರೋಡ್‌ ಶೋ


ನಗರದ ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಆರಂಭವಾದ ರೋಡ್‌ ಷೋ ಜೈಲು ಸರ್ಕಲ್‌ವರೆಗೆ ಸಾಗಿತು. ಸಾವಿರಾರು ಕಾರ್ಯಕರ್ತರು ಮೋದಿ ಮತ್ತೊಮ್ಮೆ, ಭಾರತ್‌ ಮಾತಾಕೀ ಜೈ ಎಂದು ಘೋಷಣೆ ಕೂಗಿದರು. ರಸ್ತೆಯುದ್ದಕ್ಕೂ ಕೇಸರಿ ಬಾವುಟಗಳು ರಾರಾಜಿಸಿದ್ದವು.

ಈ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಮೈತ್ರಿ ಅಭ್ಯರ್ಥಿ ಪರವಾಗಿ ಹಣ- ಹೆಂಡ ಹಂಚುತ್ತಿದ್ದಾರೆ. ಶಿವಮೊಗ್ಗದ ಸ್ವಾಭಿಮಾನಿ ಮತದಾರರು ಯಾವುದೇ ಕಾರಣಕ್ಕೂ ತಮ್ಮ ಮತ ಮಾರಿಕೊಳ್ಳುವುದಿಲ್ಲ. ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕೆಂಬ ಆಶಯ ಎಲ್ಲರಲ್ಲಿದೆ. ಕ್ಷೇತ್ರದ ಎಲ್ಲ ಬೂತ್‌ಗಳಲ್ಲೂ ಬಿಜೆಪಿಗೆ ಮೊದಲ ಸ್ಥಾನ ದೊರಕಲಿದೆ ಎಂದರು. ರಾಘವೇಂದ್ರ ಸೋಲಿಸಲು ಈಶ್ವರಪ್ಪ ಪ್ರಯತ್ನ ಮಾಡುತ್ತಿದ್ದಾರೆ ಎಂಬ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಮೋಸ ಮಾಡುವ ಪ್ರವೃತ್ತಿ ಇಲ್ಲ. ಈ ಮಾತಿಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

ಮೆರವಣಿಗೆಯಲ್ಲಿ ಶಾಸಕ ಕೆ.ಎಸ್‌.ಈಶ್ವರಪ್ಪ ಮುಖಂಡರು ಪಾಲ್ಗೊಂಡಿದ್ದರು.

============

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ