ಆ್ಯಪ್ನಗರ

ಅಧಿಕಾರದಾಸೆಗೆ ಬಿಜೆಪಿ ಕುದುರೆ ವ್ಯಾಪಾರ

ಅಧಿಕಾರ ಆಸೆಗಾಗಿ ಕಾಂಗ್ರೆಸ್‌ ಶಾಸಕರಿಗೆ ಅಮೀಷವೊಡ್ಡಿ ಕುದುರೆ ವ್ಯಾಪಾರ ಮಾಡುತ್ತಿರುವ ಬಿಜೆಪಿ ಪ್ರಜಾಪ್ರಭುತ್ವ ಕಗ್ಗೋಲೆ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

Vijaya Karnataka 10 Jul 2019, 5:00 am
ಶಿವಮೊಗ್ಗ: ಅಧಿಕಾರ ಆಸೆಗಾಗಿ ಕಾಂಗ್ರೆಸ್‌ ಶಾಸಕರಿಗೆ ಅಮೀಷವೊಡ್ಡಿ ಕುದುರೆ ವ್ಯಾಪಾರ ಮಾಡುತ್ತಿರುವ ಬಿಜೆಪಿ ಪ್ರಜಾಪ್ರಭುತ್ವ ಕಗ್ಗೋಲೆ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
Vijaya Karnataka Web SMR-9GANESH6


ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆಯಾಗಿದ್ದರೂ ಅಧಿಕಾರ ಆಸೆ ಬಿಡದ ಬಿಜೆಪಿ, ಕಾಂಗ್ರೆಸ್‌ ಶಾಸಕರತ್ತ ಬಲೆ ಬೀಸುತ್ತಿರುವ ಪರಿಣಾಮ ಇಂದು ರಾಜಕೀಯ ಬಿಕ್ಕಟ್ಟು ಸೃಷ್ಠಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆಯದೇ ಈಗ ಅಧಿಕಾರಿಕ್ಕಾಗಿ ಬಿಜೆಪಿ ಮುಖಂಡರು ಹಿಂಬಾಗಿಲ ರಾಜಕಾರಣ ನಡೆಸುತ್ತಿದ್ದಾರೆ. ಅವರ ಅಧಿಕಾರದಾಸೆಗೆ ಪ್ರಜಾಪ್ರಭುತ್ವವನ್ನು ಕಗ್ಗೋಲೆ ಮಾಡುವಂತಹ ದುಸ್ಸಾಹಸಕ್ಕೆ ಕೈ ಹಾಕಿದೆ ಎಂದು ಟೀಕಿಸಿದರು.

ಮೈತ್ರಿ ಸರಕಾರವನ್ನು ಪತನಗೊಳಿಸುವ ಸಲುವಾಗಿ ಇಂದು ಬಿಜೆಪಿ ಕುತಂತ್ರ ರಾಜಕಾರಣಕ್ಕೆ ಮುಂದಾಗಿದ್ದಾರೆ. ಅಧಿಕಾರಕ್ಕಾಗಿ ಇಂತಹ ನೀಚ ಕೆಲಸ ಮಾಡುವುದನ್ನು ಬಿಜೆಪಿ ಮುಖಂಡರು ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ಪ್ರಮುಖರಾದ ಎನ್‌.ರಮೇಶ್‌, ಇಸ್ಮಾಯಿಲ್‌ ಖಾನ್‌, ರಮೇಶ್‌ ಹೆಗ್ಡೆ, ಎಚ್‌.ಸಿ.ಯೋಗೀಶ್‌, ಅನಿತಕುಮಾರಸ್ವಾಮಿ, ವಿಜಯಲಕ್ಷ್ಮಿಪಾಟೀಲ್‌, ಜಿ.ಪಲ್ಲವಿ ಮತ್ತಿರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ