ಆ್ಯಪ್ನಗರ

ಮಳೆ ಹಾನಿ ವೀಕ್ಷಣೆಗಾಗಿ ಶಿವಮೊಗ್ಗಕ್ಕೆ ಇಂದು ಬಿಎಸ್‌ವೈ

ಮುಖ್ಯಮಂತ್ರಿಯಾದ ಬಳಿಕ ಬಿ.ಎಸ್‌.ಯಡಿಯೂರಪ್ಪ ಅವರು ಮೊದಲ ಬಾರಿಗೆ ಆ.13ರಂದು ಶಿವಮೊಗ್ಗಕ್ಕೆ ಬರುತ್ತಿದ್ದಾರೆ.

Vijaya Karnataka 13 Aug 2019, 5:00 am
ಶಿವಮೊಗ್ಗ : ಮುಖ್ಯಮಂತ್ರಿಯಾದ ಬಳಿಕ ಬಿ.ಎಸ್‌.ಯಡಿಯೂರಪ್ಪ ಅವರು ಮೊದಲ ಬಾರಿಗೆ ಆ.13ರಂದು ಶಿವಮೊಗ್ಗಕ್ಕೆ ಬರುತ್ತಿದ್ದಾರೆ.
Vijaya Karnataka Web DSC_2307


ಮಂಗಳವಾರ ಇಡೀ ದಿನ ಅವರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದರ ಜತೆಗೆ ಸಂಸದರು, ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆಗೆ ಸಭೆ ನಡೆಸುವರು.

ಬೆಳಗ್ಗೆ 5ಗಂಟೆಗೆ ರೈಲಿನಲ್ಲಿ ಶಿವಮೊಗ್ಗಕ್ಕೆ ಬರುವ ಯಡಿಯೂರಪ್ಪ, ಬೆಳಗ್ಗೆ 6.45ಕ್ಕೆ ತೀರ್ಥಹಳ್ಳಿ ತಾಲೂಕು ಹೆಗಲತ್ತಿ ಗ್ರಾಮಕ್ಕೆ ಭೇಟಿ ನೀಡುವರು. ಬೆಳಗ್ಗೆ 8ಗಂಟೆಗೆ ಶಿವಮೊಗ್ಗ ನಗರದಲ್ಲಿ ಹಾನಿಗೊಳಗಾದ ಬಡಾವಣೆಗಳಿಗೆ ಭೇಟಿ ನೀಡುವರು. ಬೆಳಗ್ಗೆ 9.45ಕ್ಕೆ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸಕ್ರ್ಯೂಟ್‌ ಹೌಸ್‌ನಲ್ಲಿ ಸಭೆ ನಡೆಸುವರು.

ಬೆಳಗ್ಗೆ 10.15ಕ್ಕೆ ಹೆಲಿಕಾಪ್ಟರ್‌ನಲ್ಲಿ ಶಿಕಾರಿಪುರಕ್ಕೆ ತೆರಳುವರು. ಬೆಳಗ್ಗೆ 11ಕ್ಕೆ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 11.30ಕ್ಕೆ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸುವರು. 11.45ರಿಂದ 1.30ರ ವರೆಗೆ ಶಿಕಾರಿಪುರ ತಾಲೂಕಿನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬಳಿಕ ಹೆಲಿಕಾಪ್ಟರ್‌ನಲ್ಲಿ ಸೊರಬಕ್ಕೆ ತೆರಳುವರು.

ಮಧ್ಯಾಹ್ನ 1.50ಕ್ಕೆ ಸೊರಬದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿ ಸಾಗರಕ್ಕೆ ತೆರಳುವರು. ಅಲ್ಲಿ ಸಂಜೆ 4ಗಂಟೆವರೆಗೆ ನೆರೆಪೀಡಿತ ಪ್ರದೇಶಗಳನ್ನು ವೀಕ್ಷಿಸಿ ಬಳಿಕ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ತೆರಳುವರು.

ರಾಜ್ಯದ ಅತ್ಯುನ್ನತ ಸ್ಥಾನ ಅಲಂಕರಿಸಿ ಶಿವಮೊಗ್ಗಕ್ಕೆ ಬರುತ್ತಿರುವ ಯಡಿಯೂರಪ್ಪ ಅವರಿಗೆ ಪಕ್ಷದ ವತಿಯಿಂದ ಅದ್ಧೂರಿ ಸ್ವಾಗತ ಕೊಡಬೇಕಿತ್ತು. ಆದರೆ, ಜಿಲ್ಲೆಯಲ್ಲಿ ಈಗ ಸಂಭ್ರಮದಿಂದ ಸ್ವಾಗತಿಸುವ ವಾತಾವರಣ ಇಲ್ಲ. ಸತತ ಒಂದು ವಾರದ ಮಳೆಯು ಶಿವಮೊಗ್ಗವನ್ನು ಮುಳುಗೇಳಿಸಿದೆ. ಹೀಗಾಗಿ ಅಂತಹ ಯಾವುದೇ ರೀತಿಯ ಕಾರ್ಯಕ್ರಮವನ್ನು ಬಿಜೆಪಿ ಹಾಕಿಕೊಂಡಿಲ್ಲ. ಸಿಎಂ ಅವರೊಂದಿಗಿನ ಪ್ರವಾಸದಲ್ಲಿ ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿ ಭಾಗವಹಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ