ಆ್ಯಪ್ನಗರ

ಪಿಎಸ್‌ಐ ಅಮಾನತಿಗೆ ಬಿಎಸ್‌ವೈ ಆಗ್ರಹ

ನಗರ ಹೊರವಲಯದಲ್ಲಿರುವ ಶಂಕರ ಕಣ್ಣಿನ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಗ್ಯ ವಿಚಾರಿಸಿದರು.

Vijaya Karnataka 8 Jan 2019, 5:00 am
ಶಿವಮೊಗ್ಗ: ನಗರ ಹೊರವಲಯದಲ್ಲಿರುವ ಶಂಕರ ಕಣ್ಣಿನ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಗ್ಯ ವಿಚಾರಿಸಿದರು.
Vijaya Karnataka Web bsy


ನಂತರ ಮಾತನಾಡಿದ ಅವರು, ಒಬ್ಬ ಶಾಸಕರ ಸ್ಥಿತಿಯೇ ಹೀಗಾದರೆ ಜನಸಾಮಾನ್ಯರ ಸ್ಥಿತಿ ಏನು? ಪ್ರಸ್ತುತ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಂಗ್ರೆಸ್‌ ಏಜೆಂಟರುಗಳು ಮರಳು ದಂಧೆಯಲ್ಲಿ ಭಾಗಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೊಸದುರ್ಗ ಪಿಎಸ್‌ಐ ಅವರನ್ನು ಕೂಡಲೇ ಅಮಾನತು ಮಾಡಬೇಕು. ನಿನ್ನೆಯ ಘಟನೆಯಲ್ಲಿ ಬಂಧಿಧಿಸಿರುವ ಅಮಾಯಕ ಜನರನ್ನು ಕೂಡಲೇ ಪೊಲೀಸರು ಬೇಷರತ್‌ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.



ರಾಜ್ಯದ ಜನತೆಗೆ ಅಪಮಾನ : ಈಶ್ವರಪ್ಪ

ರಾಜ್ಯದಲ್ಲಿ ಮರಳು ಸಮಸ್ಯೆ ನಿರಂತರವಾಗಿ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಯವರಿಗೆ ಸಮಸ್ಯೆ ಅರಿವಿಗೆ ಬರಲು ಇನ್ನೂ ಎಷ್ಟು ಎಂಎಲ್‌ಎಗಳು ಸಾಯಬೇಕೋ ಗೊತ್ತಿಲ್ಲ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಗೂಳಿಹಟ್ಟಿ ಶೇಖರ್‌ ಆರೋಗ್ಯ ವಿಚಾರಿಸಿ ಸೋಮವಾರ ಮಾತನಾಡಿದ ಅವರು, ನಿನ್ನೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಮರಳು ಸಮಸ್ಯೆಯಿಂದ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಸಿಎಂ ಯಾರು ಬೇಕಾದರೂ ಸಾಯಲಿ ನನಗೆ ಸಂಬಂಧ ಇಲ್ಲ ಎನ್ನುವಂತಿದ್ದಾರೆ. ಮುಖ್ಯಮಂತ್ರಿಯವರು ರಾಜ್ಯದ ಜನತೆಗೆ ಅಪಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ