ಆ್ಯಪ್ನಗರ

ವಿಐಎಸ್‌ಎಲ್‌ ಆಧುನೀಕರಣಕ್ಕೆ ಬಿವೈಆರ್‌ ಆಗ್ರಹ

ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್‌ಎಲ್‌) ಬಂಡವಾಳ ಹಿಂತೆಗೆತದ ತೀರ್ಮಾನವನ್ನು ಹಿಂತೆಗೆದುಕೊಂಡು ಕಾರ್ಖಾನೆಯನ್ನು ಆಧುನೀಕರಿಸಬೇಕೆಂದು ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

Vijaya Karnataka 3 Jul 2019, 5:00 am
ಶಿವಮೊಗ್ಗ : ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್‌ಎಲ್‌) ಬಂಡವಾಳ ಹಿಂತೆಗೆತದ ತೀರ್ಮಾನವನ್ನು ಹಿಂತೆಗೆದುಕೊಂಡು ಕಾರ್ಖಾನೆಯನ್ನು ಆಧುನೀಕರಿಸಬೇಕೆಂದು ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸರಕಾರವನ್ನು ಒತ್ತಾಯಿಸಿದರು.
Vijaya Karnataka Web BYR-2


ಲೋಕಸಭೆ ಅಧಿವೇಶನದಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ವಿಐಎಸ್‌ಎಲ್‌ ವಿಷಯವನ್ನು ಪ್ರಸ್ತಾಪಿಸಿ ಸದನ ಮತ್ತು ಸರಕಾರದ ಗಮನ ಸೆಳೆದರು.

ದೇಶದ ಮೊದಲ ಉಕ್ಕು ಕಾರ್ಖಾನೆಗೆ ನೂರು ವರ್ಷದ ಇತಿಹಾಸವಿದೆ. ಸುವರ್ಣ ದಿನಗಳನ್ನು ಕಂಡ ಕಾರ್ಖಾನೆಯುಲ್ಲಿ ಉತ್ಪಾದನಾ ವೆಚ್ಚ ಅಧಿಕವಾಗಿ ನಿರಂತರ ನಷ್ಟ ಅನುಭವಿಸಿದ ಕಾರಣಕ್ಕೆ ಸರಕಾರವು ಬಂಡವಾಳ ಹಿಂತೆಗೆದುಕೊಳ್ಳುವ ನಿಲುವು ತೆಗೆದುಕೊಂಡಿದೆ. ಇದರಿಂದಾಗಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಗುತ್ತಿಗೆ ಕಾರ್ಮಿಕರು ಕೆಲಸ ಇಲ್ಲದೆ, ವೇತನವೂ ಇಲ್ಲದೆ ತೀವ್ರ ಸಮಸ್ಯೆಗೆ ಒಳಗಾಗಿದ್ದಾರೆ. ರಾಜ್ಯ ಸರಕಾರಿ ಸ್ವಾಮ್ಯದಲ್ಲಿದ್ದ ಕಾರ್ಖಾನೆಯನ್ನು 1989ರಲ್ಲಿ ಕೇವಲ 1 ರೂ.ಗೆ ಕೇಂದ್ರ ಸರಕಾರದ ಅಧೀನಕ್ಕೆ ನೀಡಲಾಯಿತು.

ಕಾರ್ಖಾನೆಯ ಆಧುನೀಕರಣಕ್ಕೆ ಬಂಡವಾಳ ತೊಡಗಿಸುವ ಭರವಸೆ ನೀಡಿದ್ದ ಕೇಂದ್ರ ಸರಕಾರವು ಅಲ್ಲಿಂದ ಇಲ್ಲಿವರೆಗೆ ಕೇವಲ 150 ಕೋಟಿ ರೂ.ಗಳನ್ನು ಮಾತ್ರ ತೊಡಗಿಸಿದೆ. ಈ ಅವಧಿಯಲ್ಲಿ ಕೇಂದ್ರ ಸರಕಾರವು ದೇಶದೆಲ್ಲೆಡೆ 75ಸಾವಿರ ಕೋಟಿ ರೂ.ಗಳನ್ನು ತೊಡಗಿಸಿದೆ. ಆದರೆ ವಿಐಎಸ್‌ಎಲ್‌ಗೆ ಮಾತ್ರ ಹೆಚ್ಚಿನ ಆದ್ಯತೆ ಸಿಕ್ಕಿಲ್ಲ ಎಂದರು.

ಕಾರ್ಖಾನೆ, ಕಾರ್ಮಿಕರ ಹಿತದೃಷ್ಟಿಯಿಂದ ಬಂಡವಾಳ ಹೂಡಿಕೆಯ ಪಟ್ಟಿಯಿಂದ ಹೊರಗಿಟ್ಟಿರುವುದನ್ನು ಕೈಬಿಡಬೇಕು. ಕಾರ್ಖಾನೆ ಆಧುನೀಕರಣಕ್ಕೆ ಬಂಡವಾಳ ಹೂಡಿಕೆ ಮಾಡಬೇಕು. ಕಾರ್ಮಿಕರನ್ನು ರಕ್ಷಣೆ ಮಾಡಬೇಕು. ಗುತ್ತಿಗೆ ಕಾರ್ಮಿಕರಿಗೆ ತಿಂಗಳು ಪೂರ್ತಿ ಕೆಲಸ ಕೊಡಬೇಕು ಎಂದು ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ