ಆ್ಯಪ್ನಗರ

ದೇಶಾದ್ಯಂತ ಭುಗಿಲೆದ್ದ ಪೌರತ್ವ ಕಾಯಿದೆ ಗಲಭೆಯ ಹಿಂದೆ ಕಾಂಗ್ರೆಸ್ ಕೈವಾಡ: ನಳೀನ್‌ ಕುಮಾರ್‌ ಕಟೀಲ್‌

ಕಾಂಗ್ರೆಸ್‌ ಮೋದಿ ಸರಕಾರದ ವಿರುದ್ಧ ಪೌರತ್ವ ಕಾಯಿದೆ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ನಳೀನ್‌ ಕುಮಾರ್‌ ಕಟೀಲ್‌ ಆರೋಪಿಸಿದರು.

Vijaya Karnataka Web 17 Dec 2019, 1:36 pm
ಶಿವಮೊಗ್ಗ: ಪೌರತ್ವ ಕಾಯಿದೆ ವಿರೋಧಿಸಿ ದೇಶಾದ್ಯಂತ ಭುಗಿಲೆದ್ದ ಗಲಭೆಯ ಹಿಂದೆ ಕಾಂಗ್ರೆಸ್ ನ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
Vijaya Karnataka Web Nalin Kumar Kateel


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ಗಲಭೆ ಎಬ್ಬಿಸಲು ಕಾಂಗ್ರೆಸ್ ಗೆ ಯಾವುದೇ ವಿಚಾರ ಸಿಕ್ಕಿರಲಿಲ್ಲ, ಈಗ ಪೌರತ್ವ ಕಾಯಿದೆ ವಿಚಾರವಾಗಿ ದೇಶಾದ್ಯಂತ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ವೈಚಾರಿಕವಾಗಿ, ಬೌದ್ಧಿಕವಾಗಿ ಹಾಗೂ ಸಂಘಟನಾತ್ಮಕವಾಗಿ ದಿವಾಳಿಯಾಗಿದೆ. ಮೋದಿ ಸರಕಾರದ ವಿರುದ್ಧ ಪೌರತ್ವ ಕಾಯಿದೆ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿದೆ ಎಂದು ಟೀಕಿಸಿದರು.

ಮಂತ್ರಿಮಂಡಲದ ಕುರಿತು ಪ್ರತಿಕ್ರಿಯಿಸಿದ ನಳೀನ್‌ ಕುಮಾರ್‌ ಕಟೀಲ್‌, ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಂಘಟನೆ ಮಾಡುವ ದೃಷ್ಟಿಯಿಂದ ಪ್ರವಾಸ ಮಾಡಲಾಗುತ್ತಿದೆ. ಮತಗಟ್ಟೆ, ಮಂಡಲ, ಜಿಲ್ಲಾಧ್ಯಕ್ಷರ ಬದಲಾವಣೆ ಹಾಗೂ ಮುಂದಿನ ಮೂರು ವರ್ಷಗಳ ಕಾರ್ಯ ಯೋಜನೆಯ ಬಗ್ಗೆ ಚರ್ಚೆ ನಡೆಸಲಾಯಿತು. ಇದು ಬಿಜೆಪಿಯ ಪದ್ಧತಿಯಂತೆ ಬದಲಾವಣೆ ನಡೆಯುತ್ತಿದೆ. ಇಂದು ಕಾರ್ಯಕರ್ತರ ಸಭೆಗೆ ಬಂದಿದ್ದೇನೆ ಎಂದರು.

ಯಾರಿಗೆ ಮಂತ್ರಿ‌ಸ್ಥಾನ ನೀಡಬೇಕು ಮಂತ್ರಿ ಮಂಡಲ ಬದಲಾವಣೆಯ ಬಗ್ಗೆ ಸಿಎಂ ಪರಮಾಧಿಕಾರವನ್ನು ಹೊಂದಿದ್ದಾರೆ. ಸೂಕ್ತ ಸಮಯದಲ್ಲಿ ತೀರ್ಮಾನ ತೆಗೆದು ಕೊಳ್ಳಲಿದ್ದಾರೆ. ಯಾರಿಗೆ ಯಾವ ಮಂತ್ರಿ ಸ್ಥಾನ ನೀಡಬೇಕು ಎಂಬುದನ್ನು ಸಹ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಿಎಂ ಸೂಕ್ತ ತೀರ್ಮಾನ ತೆಗೆದು ಕೊಳ್ಳಲಿದ್ದಾರೆ. ಬಿಜೆಪಿಗೆ ಸೇರಿದ ಮೇಲೆ ಮೂಲ ಹೊಸಬರು ಎಂದು ಏನೂ ಇಲ್ಲ. ಉಪ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿದ್ದರಿಂದ ಅಭೂತ ಪೂರ್ವ ಜಯ ಲಭಿಸಿದೆ. ಅವರನ್ನು ನಮ್ಮ ಪಕ್ಷದ ಕಾರ್ಯಕರ್ತರು ಸ್ವೀಕಾರ ಮಾಡಿದ್ದಾರೆ. ಅವರು ಸಹ ನಮ್ಮ ಮಾತೃ ಪಕ್ಷವೆಂದು ಬಂದಿದ್ದಾರೆ. ಇದರಿಂದ 12 ಸ್ಥಾನ ಗಳಿಸಿದ್ದೇವೆ ಎಂದರು.

ಶ್ರೀರಾಮುಲು ನನಗೆ ಡಿಸಿಎಂ ಸ್ಥಾನ ನೀಡಿದರೆ ಬೇಡ ಎನ್ನುವುದಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕಟೀಲ್‌, ಎಲ್ಲರೂ ಹಾಗೆ ಹೇಳುತ್ತಾರೆ. ನಮಗೆ ಕೊಡಿ ಎನ್ನುವುದಕ್ಕೂ, ನನಗೆ ಕೊಟ್ಟರೆ ಬೇಡ ಎಂಬುದಕ್ಕೆ ವ್ಯತ್ಯಾಸವಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ