ಆ್ಯಪ್ನಗರ

ಕೊಡಚಾದ್ರಿ-ಕೊಲ್ಲೂರಿಗೆ ಕೇಬಲ್‌ ಕಾರ್‌

ಕೊಡಚಾದ್ರಿ ಮತ್ತು ಕೊಲ್ಲೂರು ನಡುವೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸಾರ್ವಜನಿಕ ಸಹಭಾಗಿತ್ವದಲ್ಲಿಕೇಬಲ್‌ಕಾರ್‌ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Vijaya Karnataka 18 Jan 2020, 5:00 am
ಶಿವಮೊಗ್ಗ: ಕೊಡಚಾದ್ರಿ ಮತ್ತು ಕೊಲ್ಲೂರು ನಡುವೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸಾರ್ವಜನಿಕ ಸಹಭಾಗಿತ್ವದಲ್ಲಿಕೇಬಲ್‌ಕಾರ್‌ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
Vijaya Karnataka Web cable car to kodachadri kollur
ಕೊಡಚಾದ್ರಿ-ಕೊಲ್ಲೂರಿಗೆ ಕೇಬಲ್‌ ಕಾರ್‌


ನಗರದ ಪ್ರವಾಸಿ ಮಂದಿರದಲ್ಲಿಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಸಾಧ್ಯತೆ, ಸವಾಲುಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಶುಕ್ರವಾರ ನಡೆದ ಸಮಾಲೋಚನೆ ಸಭೆಯಲ್ಲಿಮಾತನಾಡಿ, ಕೊಲ್ಲೂರು ಮತ್ತು ಕೊಡಚಾದ್ರಿ ನಡುವೆ 32 ಕಿ.ಮೀ. ದೂರದ ಅಂತರವಿದ್ದು, 11ಕಿ.ಮೀ. ಕೇಬಲ್‌ ಕಾರ್‌ ಸಂಪರ್ಕ ಅಳವಡಿಸುವುದರಿಂದ ಪ್ರಯಾಣದ ಅಂತರ ಕಡಿಮೆಯಾಗಲಿದೆ. ಜತೆಗೆ, ಸಮಯದ ಉಳಿತಾಯವಾಗಲಿದೆ ಎಂದರು.

ಈ ಭಾಗದ ಪ್ರಾಕೃತಿಕ ಸೌಂದರ್ಯಕ್ಕೆ ಕಿಂಚಿತ್ತೂ ತೊಂದರೆ ಆಗದಂತೆ ಹಾಗೂ ಇರುವ ಪ್ರಕೃತಿ ಸೌಂದರ್ಯ ಉಳಿಸಿಕೊಂಡು ಅಭಿವೃದ್ಧಿ ಪಡಿಸಬಹುದಾದ ವಿಧಾನಗಳ ಕುರಿತು ಸಮೀಕ್ಷೆ ಮಾಡಿ ಪ್ರಸ್ತಾವನೆ ಸಲ್ಲಿಸಿದಲ್ಲಿ, ಅದನ್ನು ಪರಿಶೀಲಿಸಿ, ಪರಿಸರ, ಅರಣ್ಯ ಇಲಾಖೆಗಳಿಂದ ನಿರಾಪೇಕ್ಷಣ ಪತ್ರ ಪಡೆಯಲು ಹಾಗೂ ಕೇಂದ್ರ ಸರಕಾರದಿಂದ ಅನುಮತಿ ಕೊಡಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ತಿಳಿಸಿದರು.

ಪ್ರಸ್ತಾವಿತ ಯೋಜನೆಗೆ 1,200 ಕೋಟಿ ರೂ.ಗಳ ಅಂದಾಜು ವೆಚ್ಚ ತಗಲುವ ಸಾಧ್ಯತೆ ಇದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಅಗತ್ಯ ಸಹಕಾರ ನೀಡಿದಲ್ಲಿಯೋಜನೆಯನ್ನು ನಿಗದಿತ ಕಾಲಮಿತಿಯಲ್ಲಿಪೂರ್ಣಗೊಳಿಸಲು ಯತ್ನಿಸಲಾಗುವುದು ಎಂದು ಬೆಂಗಳೂರು ಮೀನಸ್‌ ಅಡ್ವೆಂಚರ್ಸ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ನಜೀರ್‌ ಎ.ಭಟ್‌ ಹೇಳಿದರು.

ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆಯೂ ಸಮಾಲೋಚನೆ ನಡೆಸಿದ ಸಂಸದರು, ಇದೇ ಮಾದರಿಯಲ್ಲಿಜೋಗ ಅಭಿವೃದ್ಧಿಗೂ ಗಮನಹರಿಸುವ ಅಗತ್ಯತೆಗಳ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ಸರಕಾರವು 20 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಿದೆ. ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಅಕ್ಕಮಹಾದೇವಿಯ ಜನ್ಮಸ್ಥಳ ಉಡುತಡಿಯ ಸರ್ವಾಂಗೀಣ ವಿಕಾಸಕ್ಕೆ ಹಾಗೂ ಶರಣರ ಚಳವಳಿ ನಡೆದು ಬಂದ ಬಗೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶದಿಂದ ಉಡುತಡಿಯ ಕೋಟೆಗೆ ಹೊಂದಿಕೊಂಡಂತಿರುವ ಅರ್ಧ ಕಿ.ಮೀ. ವಿಸ್ತೀರ್ಣದಲ್ಲಿರುವ ಅಗಳವನ್ನು ಅತ್ಯಾಧುನಿಕ ರೀತಿಯಲ್ಲಿಅಭಿವೃದ್ಧಿಪಡಿಸಲು ಯೋಜನೆ ತಯಾರಿಸಲಾಗಿದೆ. ಈ ಅಗಳಕ್ಕೆ ಅಂಜನಾಪುರ ಜಲಾಶಯದಿಂದ ನೀರನ್ನು ತರುವ ಬಗ್ಗೆಯೂ ಚಿಂತಿಸಲಾಗಿದೆ. ಚಂದ್ರಗುತ್ತಿ, ಕೆಳದಿ, ನಗರ ಕೋಟೆ ಹಾಗೂ ಕಲ್ಲೂರು-ಮಂಡ್ಲಿಸಾಹಸ ಕೇಂದ್ರ ಹಾಗೂ ಕವಲೇದುರ್ಗ ಕೋಟೆ ಅಭಿವೃದ್ಧಿಗೂ ಅಗತ್ಯ ಅನುದಾನ ಮಂಜೂರು ಮಾಡಲಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣ, ಉಡುತಡಿ ಅಭಿವೃದ್ಧಿಗೆ ಸಂಬಂಧಿಸಿದ ಅಲ್ಕನ್‌ ಕನ್‌ಸ್ಟ್ರಕ್ಷನ್ಸ್‌ ಸಂಸ್ಥೆಯ ವಿನಾಯಕ್‌, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ರವಿ ಉಪಸ್ಥಿತರಿದ್ದರು.

===

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ