ಆ್ಯಪ್ನಗರ

ಗಾಂಜಾ ಬೆಳೆದವನಿಗೆ ಕಾರಾಗೃಹ ಶಿಕ್ಷೆ

ಶುಂಠಿ ಬೆಳೆ ಮಧ್ಯದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯೊಬ್ಬರಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆದೇಶಿಸಿದ್ದಾರೆ.

Vijaya Karnataka 18 Jul 2019, 5:00 am
ಶಿವಮೊಗ್ಗ : ಶುಂಠಿ ಬೆಳೆ ಮಧ್ಯದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯೊಬ್ಬರಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆದೇಶಿಸಿದ್ದಾರೆ.
Vijaya Karnataka Web cannabis prison sentence
ಗಾಂಜಾ ಬೆಳೆದವನಿಗೆ ಕಾರಾಗೃಹ ಶಿಕ್ಷೆ


ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮ ನಿವಾಸಿ ಮೈಲಾರಪ್ಪ (38) ಎಂಬುವವರೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ತಾನು ಸಾಗುವಳಿ ಮಾಡುತ್ತಿದ್ದ ಜಮೀನಿನಲ್ಲಿ 25 ಕೆಜಿ ತೂಕದಷ್ಟು ಒಟ್ಟು 17 ಗಾಂಜಾ ಗಿಡಗಳನ್ನು ಬೆಳೆಸಿದ್ದ. ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪೊಲೀಸರು 2017ರ ಅಕ್ಟೋಬರ್‌ 4ರಂದು ದಾಳಿ ನಡೆಸಿ ಗಾಂಜಾ ವಶಕ್ಕೆ ಪಡೆದು ಮೈಲಾರಪ್ಪ ಅವರನ್ನು ಬಂಧಿಸಿದ್ದರು.

ಸಾಕ್ಷ್ಯಾಧಾರ ಹಾಗೂ ಸರಕಾರದ ಪರ ಅಭಿಯೋಜಕ ವಿ.ಜಿ.ಯಳಗೇರಿ ಅವರ ವಾದವನ್ನು ಪುರಸ್ಕರಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಭಾವತಿ ಎಂ.ಹಿರೇಮಠ ಅವರು ಶಿಕ್ಷೆ ವಿಧಿಸಿದ್ದಾರೆ.

* 4 ವರ್ಷ ಜೈಲು:
ಬಗರ್‌ ಹುಕುಂ ಜಮೀನಿನಲ್ಲಿ 75 ಗಾಂಜಾ ಗಿಡಗಳನ್ನು ಬೆಳೆಸಿದ್ದ ಶಿವಮೊಗ್ಗ ತಾಲೂಕಿನ ರೇಚಿಕೊಪ್ಪ ಗ್ರಾಮದ ನಿವಾಸಿ ಹೊಸಕೊಪ್ಪದ ನಾರಾಯಣಪ್ಪ ಎಂಬುವವರಿಗೆ ನ್ಯಾಯಾಧೀಶರಾದ ಪ್ರಭಾವತಿ ಅವರು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕ ವಿ.ಜಿ.ಯಳಗೇರಿ ಅವರು ವಾದ ಮಂಡಿಸಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ