ಆ್ಯಪ್ನಗರ

ಕಾರು-ಲಾರಿ ಡಿಕ್ಕಿ: ಮಗು ಸಾವು, ದಂಪತಿಗೆ ಗಾಯ

ಸಮೀಪದ ಅರಸಾಳು ಗ್ರಾ.ಪಂ. ವ್ಯಾಪ್ತಿಯ ಅವಣಿಗೆ ಕ್ರಾಸ್‌ನಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಎರಡು ವರ್ಷದ ಮಗು ಮೃತಪಟ್ಟಿದ್ದು, ದಂಪತಿ ಗಾಯಗೊಂಡಿದ್ದಾರೆ.

Vijaya Karnataka 20 Jul 2019, 5:00 am
ರಿಪ್ಪನ್‌ಪೇಟೆ: ಸಮೀಪದ ಅರಸಾಳು ಗ್ರಾ.ಪಂ. ವ್ಯಾಪ್ತಿಯ ಅವಣಿಗೆ ಕ್ರಾಸ್‌ನಲ್ಲಿ ಶುಕ್ರವಾರ ಸಂಜೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಎರಡು ವರ್ಷದ ಮಗು ಮೃತಪಟ್ಟಿದ್ದು, ದಂಪತಿ ಗಾಯಗೊಂಡಿದ್ದಾರೆ.
Vijaya Karnataka Web car lorry collision child death couple injured
ಕಾರು-ಲಾರಿ ಡಿಕ್ಕಿ: ಮಗು ಸಾವು, ದಂಪತಿಗೆ ಗಾಯ


ರಿಪ್ಪನ್‌ಪೇಟೆಯ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು, ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸ್ಕಂದ (2) ಸ್ಥಳದಲ್ಲೇ ಮೃತಪಟ್ಟಿದೆ.

ಗಂಭೀರ ಗಾಯಗೊಂಡ ದಂಪತಿಗಳಾದ ಶಾಂತಕುಮಾರಿ ಮತ್ತು ರಾಮಣ್ಣ, ಸಾಗರ ತಾಲೂಕಿನ ಗಾಳಿಪುರ ಹೊಸಕೊಪ್ಪ ನಿವಾಸಿಗಳೆಂದು ಗುರುತಿಸಲಾಗಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ