ಆ್ಯಪ್ನಗರ

ಬಿಎಸ್‌ವೈ ಅಧಿಕಾರ ಸ್ವೀಕಾರ: ಮಳೆಯ ಮಧ್ಯೆಯೂ ಕುಂದದ ಉತ್ಸಾಹ, ಶಿವಮೊಗ್ಗದಲ್ಲಿ ಸಂಭ್ರಮ

ಬಿಜೆಪಿಯ ಹೋರಾಟಗಾರ ಎಂದೇ ಖ್ಯಾತಿ ಹೊಂದಿರುವ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ತಡ ರಾಜ್ಯದ ಎಲ್ಲೆಡೆ ಸಂಭ್ರಮಾಚರಣೆ ಜೋರಾಗಿ ಸಾಗಿದೆ.

Vijaya Karnataka Web 26 Jul 2019, 9:31 pm
ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕನೇ ಸಲ ಅಧಿಕಾರ ವಹಿಸಿಕೊಂಡ ಬಿ.ಎಸ್.ಯಡಿಯೂರಪ್ಪ ಅವರ ಸ್ವಕ್ಷೇತ್ರದಲ್ಲಿ ಶುಕ್ರವಾರ ಸಂಭ್ರಮ ಮನೆ ಮಾಡಿತ್ತು.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದೇ ತಡ ನಗರದ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಪರ ಘೋಷಣೆಗಳನ್ನು ಕೂಗಲಾಯಿತು.

ಜಡಿ ಮಳೆಯ ಮಧ್ಯೆಯೂ ಕಾರ್ಯಕರ್ತರು ಉತ್ಸಾಹದಿಂದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಪ್ರಮಾಣ ವಚನ ಸ್ವೀಕರಿಸುತ್ತಿರುವುದನ್ನು ಮೊಬೈಲ್‌ನಲ್ಲಿಯೇ ವೀಕ್ಷಿಸಲಾಯಿತು. ಪ್ರಕ್ರಿಯೆ ಮುಗಿದ ಬಳಿಕ ಘೋಷಣೆಗಳನ್ನು ಕೂಗುತ್ತಾ ಸಿಹಿ ಹಂಚಿದರು.

ಯಡಿಯೂರಪ್ಪ ಅವರ ಸ್ವಕ್ಷೇತ್ರವಾದ ಶಿಕಾರಿಪುರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಿದರೂ ಅಧಿಕಾರ ಸಿಕ್ಕಿಲ್ಲವೆಂಬ ಬೇಸರ ಕ್ಷೇತ್ರದ ಜನರಲ್ಲಿತ್ತು. ಆದರೆ ಅದು ಬಿಎಸ್‌ವೈ ಅವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಕಣ್ಮರೆಯಾಯಿತು. ಸಾಗರದಲ್ಲೂ ಕಾರ್ಯಕರ್ತರು ಹರ್ಷೋದ್ಗಾರ ಮೆರೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ