ಆ್ಯಪ್ನಗರ

ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು

ತಾಲೂಕಿನ ಓತಿಘಟ್ಟದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬರು ಗುರುವಾರ ಬೆಳಗ್ಗೆ ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Vijaya Karnataka 17 May 2019, 5:00 am
ಶಿವಮೊಗ್ಗ : ತಾಲೂಕಿನ ಓತಿಘಟ್ಟದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬರು ಗುರುವಾರ ಬೆಳಗ್ಗೆ ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
Vijaya Karnataka Web central prisons death
ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು


ಸಾಗರದ ಜನ್ನತ್‌ ನಗರ ನಿವಾಸಿ ಇರ್ಫಾನ್‌(28) ಎಂಬಾತನೇ ಮೃತ ಕೈದಿ. ಈತ ಪೋಕ್ಸೊ ಕಾಯಿದೆ ಅಡಿ ಬಂಧಿತನಾಗಿ ವಿಚಾರಣೆ ಎದುರಿಸುತ್ತಿದ್ದ. ಗುರುವಾರ ಬೆಳಗಿನ ಜಾವ 4.30ಕ್ಕೆ ಸುಸ್ತಾಗುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಆರೋಗ್ಯ ಸುಧಾರಣೆ ಕಂಡಿದ್ದ ಹಿನ್ನೆಲೆಯಲ್ಲಿ ಈತನಿಗೆ ಮತ್ತೆ ಜೈಲಿಗೆ ಕರೆತರಲಾಗಿದೆ. 8.15ರ ಹೊತ್ತಿಗೆ ಮತ್ತೆ ಕುಸಿದು ಬಿದ್ದಿದ್ದಾನೆ. ಬಳಿಕ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಈತ 9.30ರ ಹೊತ್ತಿಗೆ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಇರ್ಫಾನ್‌ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈದ್ಯರು ನೀಡುವ ಮರಣೋತ್ತರ ಪರೀಕ್ಷಾ ವರದಿಯ ಬಳಿಕವೇ ಇದು ತಿಳಿಯಲಿದೆ ಎಂದು ಕೇಂದ್ರ ಕಾರಾಗೃಹಗದ ಅಧೀಕ್ಷಕಿ ದಿವ್ಯಶ್ರೀ ತಿಳಿಸಿದ್ದಾರೆ.

ಕೈದಿಗಳಿಂದ ಪ್ರತಿಭಟನೆ:
ಇರ್ಫಾನ್‌ಗೆ ಸಕಾಲಕ್ಕೆ ಚಿಕಿತ್ಸೆ ಒದಗಿಸಿದಿದ್ದರೆ ಬದುಕುತಿದ್ದ. ಆದರೆ, ಚಿಕಿತ್ಸೆ ಕೊಡಿಸುವ ವಿಷಯದಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿ ಕೈದಿಗಳು ಜೈಲಿನಲ್ಲಿಯೇ ಪ್ರತಿಭಟನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ