ಆ್ಯಪ್ನಗರ

ಅಧಿಕಾರಿಗಳಿಂದ ಬಾಲಕಾರ್ಮಿಕರ ತಪಾಸಣೆ

ಪಟ್ಟಣದಲ್ಲಿ ಕಾರ್ಮಿಕ ಇಲಾಖೆ, ಪೊಲೀಸ್‌ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರುಗಳ ಜಂಟಿ ಸಹಯೋಗದಲ್ಲಿ ಆಪರೇಷನ್‌ ಮುಷ್ಕಾನ್‌ ಕಾರ್ಯಾಚರಣೆ ಹೆಸರಿನಲ್ಲಿ ಅಂಗಡಿ, ಹೋಟೆಲ್‌, ಗ್ಯಾರೇಜ್‌, ಬೇಕರಿ ಇತರೆಡೆ ಸೋಮವಾರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು.

Vijaya Karnataka 24 Jul 2019, 5:00 am
ಸೊರಬ: ಪಟ್ಟಣದಲ್ಲಿ ಕಾರ್ಮಿಕ ಇಲಾಖೆ, ಪೊಲೀಸ್‌ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರುಗಳ ಜಂಟಿ ಸಹಯೋಗದಲ್ಲಿ ಆಪರೇಷನ್‌ ಮುಷ್ಕಾನ್‌ ಕಾರ್ಯಾಚರಣೆ ಹೆಸರಿನಲ್ಲಿ ಅಂಗಡಿ, ಹೋಟೆಲ್‌, ಗ್ಯಾರೇಜ್‌, ಬೇಕರಿ ಇತರೆಡೆ ಸೋಮವಾರ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಪಾಸಣೆ ನಡೆಸಲಾಯಿತು.
Vijaya Karnataka Web SMR-22SRBP1-1


ಕಾರ್ಮಿಕ ನಿರೀಕ್ಷ ಕ ಬಿ.ಶಿವಕುಮಾರ್‌ ಮಾಲೀಕರಿಗೆ ಕಾಯಿದೆ ಬಗ್ಗೆ ಮಾಹಿತಿ ನೀಡಿ, ಕೇಂದ್ರ ಸರಕಾರ ಜಾರಿಗೆ ತಂದಿರುವ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಕಾಯಿದೆ ಅಡಿ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರನ್ನು ಯಾವುದೇ ಸಂಸ್ಥೆಗಳಲ್ಲಿ ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆ, ಸಂಸ್ಥೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಒಂದುವೇಳೆ ಮಾಲೀಕರು ನೇಮಿಸಿಕೊಂಡಲ್ಲಿ 20ರಿಂದ 50 ಸಾವಿರ ರೂಪಾಯಿವರೆಗೆ ದಂಡ ಹಾಗೂ 6 ತಿಂಗಳ ಜೈಲುಶಿಕ್ಷೆ ವಿಧಿಸಲಾಗುವುದು. ಹಾಗೂ ಮಾಲೀಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗುವುದು. ಯಾರೊಬ್ಬರೂ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಸೂಚಿಸಿದರು.

ಕಾರ್ಮಿಕ ನಿರೀಕ್ಷ ಕ ಶಿವಕುಮಾರ್‌, ಎಎಸ್‌ಐ ಚಿನ್ನಪ್ಪ, ರಘುನಾಥ್‌, ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ